ಆ್ಯಪ್ನಗರ

ಹಿಂದಿ ಹೇರಿಕೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಬರೆ : ಸಿದ್ದರಾಮಯ್ಯ ಆಕ್ಷೇಪ

ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಕುರಿತು ವಿಜಯ ಕರ್ನಾಟಕ ದಿನಪತ್ರಿಕೆ ಪ್ರಕಟಿಸಿದ್ದ ಸುದ್ದಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿ ಎತ್ತಿದ್ದಾರೆ.

Vijaya Karnataka Web 18 Sep 2019, 2:35 pm
ಬೆಂಗಳೂರು: ಐಬಿಪಿಎಸ್‌ ಮತ್ತು ಎಲ್‌ಐಸಿ ಸಂಸ್ಥೆಗಳು ಸಾವಿರಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿವೆ. ಆದರೆ, ನೇಮಕಾತಿ ಪರೀಕ್ಷೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಇರುವುದರಿಂದ ಈ ಹುದ್ದೆಗಳು ಹಿಂದಿ ಭಾಷಿಗರ ಪಾಲಾಗಲಿವೆ ಎಂದು ವಿಜಯಕರ್ನಾಟಕ ಸೆಪ್ಟೆಂಬರ್‌ 17ರ ಸಂಚಿಕೆಯಲ್ಲಿ ಸುದ್ದಿ ಪ್ರಕಟ ಮಾಡಿತ್ತು. ವಿಜಯಕರ್ನಾಟಕ ಪತ್ರಿಕೆಯ ಈ ವರದಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿ ಹೇರಿಕೆಯಿಂದ ರಾಜ್ಯದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದ್ವನಿ ಎತ್ತಿದ್ದಾರೆ.
Vijaya Karnataka Web siddaramaih


"ಐಬಿಪಿಎಸ್‌ ಮತ್ತುಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ ಮತ್ತು ಇಂಗ್ಲಿಷ್‌ಗೆ ಮಣೆ ಹಾಕಲಾಗಿದೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಬರೆ ಎಳೆದಂತಾಗಿದೆ,. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು? ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.


ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ, ಸಮುದಾಯದ ಕಡಗಣನೆ ಸಲ್ಲದು. ಇದೀಗ ಐಬಿಪಿಎಸ್‌ ಮತ್ತು ಎಲ್‌ಐಸಿ ಯಿಂದ ಸಾವಿರಾರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆದರೆ ನೇಮಕಾತಿ ಪರೀಕ್ಷೆಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಯಲಿವೆ ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ನಷ್ಟವಾಗಲಿದೆ ಎಂದು ಟ್ವೀಟಿಸಿದ್ದಾರೆ.

ಭಾರತಕ್ಕೆ ಒಂದೇ ಭಾಷೆ ಇರಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರೊಟ್ಟಿಗೆ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಗಳಲ್ಲೇ ಬರೆಯು ಅವಕಾಶ ನೀಡುವಂತೆ ಬೇಡಿಕೆ ಹೆಚ್ಚಿದೆ. ಅಲ್ಲೆ ಐಬಿಪಿಎಸ್‌ ಮತ್ತು ಎಲ್‌ಐಸಿ ಮೊದಲಾದ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಬೇಡಿಕೆಯೂ ಹೆಚ್ಚಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ