ಆ್ಯಪ್ನಗರ

ಖಾತೆ ಹಂಚಿಕೆ ಬಿಕ್ಕಟ್ಟು: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಫೈಟ್‌

ಕಾಂಗ್ರೆಸ್‌ ಉಸ್ತುವಾರಿ ಕೆ. ವೇಣುಗೋಪಾಲ್‌ ಸಮ್ಮುಖದಲ್ಲಿ ಬುಧವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಮತ್ತು ಮಾಜಿ ಮುಖ್ಯಮಂತ್ರಿ ನಡುವೆ ಮಾತಿನ ಚಕಮಕಿ ನಡೆದಿದೆ.

Vijaya Karnataka Web 26 Dec 2018, 4:03 pm
ಬೆಂಗಳೂರು: ಸಾಕಷ್ಟು ಸರ್ಕಸ್‌ ಮಾಡಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಕಾಂಗ್ರೆಸ್‌ಗೆ ಈಗ ಖಾತೆ ಹಂಚಿಕೆ ಕಗ್ಗಂಟು ಎದುರಾಗಿದೆ. ಇದು ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಪರಮೇಶ್ವರ್‌- ಸಿದ್ದರಾಮಯ್ಯ ನೇರ ಫೈಟ್‌ಗೂ ಕಾರಣವಾಗಿದೆ.
Vijaya Karnataka Web ಸಿದ್ದರಾಮಯ್ಯ, ಪರಮೇಶ್ವರ್‌
ಸಿದ್ದರಾಮಯ್ಯ, ಪರಮೇಶ್ವರ್‌


ಕಳೆದ ವಾರ ಪ್ರಮಾಣ ವಚನ ಸ್ವೀಕರಿಸಿದ ಎಂಟು ಸಚಿವರಿಗೆ ಖಾತೆ ಹಂಚಿಕೆ ಜವಾಬ್ದಾರಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಹೆಗಲಿಗೆ ಹೊರಿಸಿದೆ.

ಈ ವಿಷಯದ ಕುರಿತು ಕಾಂಗ್ರೆಸ್‌ ಉಸ್ತುವಾರಿ ಕೆ. ವೇಣುಗೋಪಾಲ್‌ ಸಮ್ಮುಖದಲ್ಲಿ ಬುಧವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಮತ್ತು ಮಾಜಿ ಮುಖ್ಯಮಂತ್ರಿ ನಡುವೆ ಮಾತಿನ ಚಕಮಕಿ ನಡೆದಿದೆ.

ಪರಮೇಶ್ವರ್‌ ಬಳಿ ಇರುವ ಗೃಹ ಖಾತೆಯನ್ನು ಬಿಟ್ಟು ಕೊಡು ಎಂದು ಒತ್ತಡ ಹೇರಿದ್ದಕ್ಕೆ ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊಂದಿರುವುದರಿಂದ ಗೃಹ ಖಾತೆ ಬಿಟ್ಟುಕೊಡಬೇಕು ಎನ್ನುವುದು ಸಿದ್ದರಾಮಯ್ಯ ವಾದ. ಆದರೆ ಇದಕ್ಕೆ ಒಪ್ಪದ ಪರಮೇಶ್ವರ್‌, ಡಿಸಿಎಂ ಆದವರಿಗೆ ಎರಡು ಖಾತೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಭದಲ್ಲಿ ವೇಣುಗೋಪಾಲ್‌ ಸಮ್ಮುಖದಲ್ಲಿ ಉಭಯ ನಾಯಕರು ಭಾರಿ ವಾದ-ಪ್ರತಿವಾದ ಮಾಡಿದ್ದಾರೆ. ಇದರಿಂದಾಗಿ ಸಭೆ ಮೊಟಕುಗೊಂಡಿದೆ.

ಖಾತೆ ಹಂಚಿಕೆ ಬಹುತೇಕ ಫೈನಲ್‌ ಆಗಿದ್ದು, ಈಗ ಹೈಕಮಾಂಡ್‌ ಅಂತಿಮ ಮೊಹರಿಗೆ ರಾಜ್ಯ ಕಾಂಗ್ರೆಸ್‌ ನಾಯಕರು ಎದುರು ನೋಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ