ಆ್ಯಪ್ನಗರ

ಆಪರೇಷನ್‌ ಆಡಿಯೋ: ಮೋದಿಗೆ 'ಶೇಮ್‌ ಆನ್‌ ಯು' ಎಂದ ಸಿದ್ದರಾಮಯ್ಯ

ಜೆಡಿಎಸ್‌ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಅವರಿಗೆ ಬಿಎಸ್‌ ಯಡಿಯೂರಪ್ಪ ಆಮಿಷ ಒಡ್ಡಿದ ಆಡಿಯೋ ಕ್ಲಿಪ್‌ಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ನರೇಂದ್ರ ಮೋದಿ ಅವರ 'ನಿಯತ್‌'ಅನ್ನು ಪ್ರಶ್ನಿಸಿದ್ದಾರೆ.

Vijaya Karnataka Web 8 Feb 2019, 12:12 pm
ಬೆಂಗಳೂರು: ರಾಜ್ಯ ಬಜೆಟ್‌ 2019ರ ಮಂಡನೆಗೂ ಮೊದಲು ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಕುಮಾರಸ್ವಾಮಿ ಅವರು ಆಪರೇಷನ್‌ ಕಮಲ ಆಡಿಯೋ ಬಿಡುಗಡೆ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದು, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Vijaya Karnataka Web Siddaramaiah


ಪ್ರಧಾನಿ ನರೇಂದ್ರ ಮೋದಿ ಅವರ 'ಸಹಿ ನಿಯತ್‌' ಬಗ್ಗೆ ಪ್ರಶ್ನೆಸಿರುವ ಸಿದ್ದರಾಮಯ್ಯ, ಆಡಿಯೋ ಮೂಲಕ ನಿಮ್ಮ ಪಕ್ಷದ ನಿಯತ್‌ ಬಯಲಾಗಿದೆ. ಮಾಡೋದೆಲ್ಲಾ ಅನಾಚಾರ, ಮನೆ ಮುಂದೆ ಬೃಂದಾವನ, ಶೇಮ್‌ ಆನ್‌ ಯು ಎಂದು ಟ್ವೀಟ್‌ ಮಾಡಿದ್ದಾರೆ.


ಗುರವಾರ ರಾತ್ರಿ ತರಾತುರಿಯಲ್ಲಿ ದೇವದುರ್ಗಕ್ಕೆ ಭೇಟಿ ನೀಡಿದ್ದ ಬಿಎಸ್‌ ಯಡಿಯೂರಪ್ಪನವರು ಐಬಿಯಲ್ಲಿ ಕುಳಿತು ಆಪರೇಷನ್‌ ಕಮಲ ನಡೆಸಿದ್ದಾರೆ. ಗುರುಮಠಕಲ್‌ ಕ್ಷೇತ್ರದ ಜೆಡಿಎಸ್‌ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರಿಗೆ ಬಿಎಸ್‌ ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್‌ಅನ್ನು ಬಿಡುಗಡೆಗೊಳಿಸದರು. ಬಳಿಕ ಶರಣಗೌಡ ಖುದ್ದಾಗಿ ಸುದ್ದಿಗೋಷ್ಠಿಯಲ್ಲಿ ಫೋನ್‌ ಮೂಲಕ ಏನೇನು ಮಾತುಕತೆಗಳು ನಡೆದವು ಎಂಬ ಬಗ್ಗೆ ಮಾಹಿತಿ ನೀಡಿದ್ದರು.

Operation Kamala: ದೇವದುರ್ಗದ ಐಬಿಯಲ್ಲಿ ಬಿಎಸ್‌ವೈ 'ಆಪರೇಷನ್‌ ಕಮಲ', ಸಿಎಂ ಕುಮಾರಸ್ವಾಮಿ ಆಡಿಯೋ ಬಿಡುಗಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ