ಆ್ಯಪ್ನಗರ

ಇತರ ಹಿಂದುಳಿದ ಜನಾಂಗಕ್ಕೂ ಅಭಿವೃದ್ದಿ ನಿಗಮ ರಚಿಸಿ, ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಇತರ ಹಿಂದುಳಿದ ಜನಾಂಗಗಳ ಅಭಿವೃದ್ದಿ ನಿಟ್ಟಿನಲ್ಲಿ ನಿಗಮ ಮಂಡಳಿ ರಚಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನಂದರು? ಎಂಬ ವಿವರ ಇಲ್ಲಿದೆ

Vijaya Karnataka Web 17 Nov 2020, 1:46 pm
ಬೆಂಗಳೂರು: ಕೇವಲ ಮರಾಠರಿಗೆ ಏಕೆ? ಇತರ ಹಿಂದುಳಿದ ಜನಾಂಗಗಳ ಅಭಿವೃದ್ದಿಗೆ ನಿಗಮ ಮಂಡಳಿ ಸ್ಥಾಪಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Vijaya Karnataka Web siddaramaiah


ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಮರಾಠ ಅಭಿವೃದ್ದಿ ಪ್ರಾಧಿಕಾರದ ರಚನೆ ಓಲೈಕೆ ರಾಜಕಾರಣ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು. ಬಸವ ಕಲ್ಯಾಣದಲ್ಲಿ ಸುಮಾರು 30,000 ಮರಾಠ ಮತಗಳಿಗೆ, ಅವರನ್ನು ಓಲೈಕೆ ಮಾಡಲು ನಿಗಮ ಮಂಡಳಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಸಾಕಷ್ಟು ಸಮುದಾಯಗಳು ಬಡತನದಲ್ಲಿ ಇವೆ. ಮರಾಠ ಅಭಿವೃದ್ದಿ ಮಂಡಳಿ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ, ಆದರೆ ಬೇರೆ ಜನಾಂಗದವರಿಗೂ ಪ್ರಾಧಿಕಾರ ರಚನೆ ಮಾಡಲಿ ಎಂದು ಒತ್ತಾಯಿಸಿದರು.

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಅಸ್ತು! ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಉಪ್ಪಾರ, ವಿಶ್ವಕರ್ಮ, ಬೋವಿ, ಎಡಗೈ, ಲಂಬಾನಿ ಸಮುದಾಯಗಳಿಗೆ ನಿಗಮ ಮಂಡಳಿ ಸ್ಥಾಪನೆ ಮಾಡಲಾಗಿದೆ. ಇನ್ನೂ ಬೇಕಾಗಷ್ಟು ಸಮುದಾಯಗಳು ಇವೆ. ತಿಗಲರ ಸಮುದಾಯ, ಮಡಿವಾಳ ಸೇರಿದಂತೆ ಸಣ್ಣ ಪುಟ್ಟ ಸಮುದಾಯಗಳು ಸಾಕಷ್ಟಿವೆ. ಇವೆರೆಲ್ಲಾ ಆರ್ಥಿಕ ಸಾಮಾಜಿಕ ಹಿಂದುಳಿದವರಾಗಿದ್ದು, ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಮರಾಠ ಸಮುದಾಯ ಅಭಿವೃದ್ದಿಯ ನಿಟ್ಟಿನಲ್ಲಿ ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಇದರ ಬೆನ್ನಲ್ಲೇ ಲಿಂಗಾಯತ ಅಭಿವೃದ್ದಿ ನಿಗಮಕ್ಕೂ ಸರ್ಕಾರ ಆದೇಶ ನೀಡಿದೆ. ಈ ಪೈಕಿ ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ