ಆ್ಯಪ್ನಗರ

ಸಿದ್ದರಾಮಯ್ಯ ಸಿಎಂ ಆಗಬೇಕು, ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆ ಆಗಲ್ಲ: ಕಂಪ್ಲಿ ಶಾಸಕ ಗಣೇಶ್‌

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಡಳಿತದ ಮೇಲೆ ಅಪನಂಬಿಕೆ ಅಥವಾ ಅಸಮಧಾನ ಇಲ್ಲ ಅಥವಾ ಅವರ ಆಡಳಿತ ವೈಖರಿ ಬಗ್ಗೆ ಬೇಸರ ಇಲ್ಲ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಒಳಿತು. ಸಿದ್ದರಾಮಯ್ಯ ಆಡಳಿತ ಸೂಕ್ತವಾಗಿದೆ ಎಂದು ಗಣೇಶ್‌ ಹೇಳಿದ್ದಾರೆ.

Vijaya Karnataka Web 6 Dec 2018, 12:32 pm
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಮೈತ್ರಿ ಸರಕಾರದಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ತಿಳಿಸಿದ್ದಾರೆ.
Vijaya Karnataka Web ಕಂಪ್ಲಿ ಶಾಸಕ ಗಣೇಶ್‌
ಕಂಪ್ಲಿ ಶಾಸಕ ಗಣೇಶ್‌


ಬೆಂಗಳೂರಿನ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್‌, ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಎಲ್ಲರಿಗೂ ಒಳ್ಳೆಯದು. ನನ್ನ ಅಭಿಪ್ರಾಯ ಕೂಡ ಅದೇ. ಕಾಂಗ್ರೆಸ್‌ನಲ್ಲಿ ಹಲವು ನಾಯಕರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ ಎಂದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಡಳಿತದ ಮೇಲೆ ಅಪನಂಬಿಕೆ ಅಥವಾ ಅಸಮಧಾನ ಇಲ್ಲ ಅಥವಾ ಅವರ ಆಡಳಿತ ವೈಖರಿ ಬಗ್ಗೆ ಬೇಸರ ಇಲ್ಲ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಒಳಿತು. ಸಿದ್ದರಾಮಯ್ಯ ಆಡಳಿತ ಸೂಕ್ತವಾಗಿದೆ ಎಂದು ಗಣೇಶ್‌ ಹೇಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಬೆಂಬಲಿಸುವ ನಾವು 40-50 ಶಾಸಕರಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ನಮ್ಮ ಬೆಂಬಲ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಡಿಸೆಂಬರ್‌ 22ರಂದು ಸಂಪುಟ ವಿಸ್ತರಣೆ ಆಗುತ್ತದೆ ಎನ್ನುವ ಭರವಸೆಯೂ ಇಲ್ಲ. ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆ ಆಗಲ್ಲ. ಇದರಿಂದ ಅಸಮಾಧಾನ ಇನ್ನೂ ಹೆಚ್ಚಾಗುತ್ತದೆ ಎಂದು ಕಂಪ್ಲಿ ಶಾಸಕ ಗಣೇಶ್‌ ತಿಳಿಸಿದ್ದಾರೆ.

ಯಾರೇ ಏನೇ ಹೇಳಿದರೂ ಸಂಪುಟ ವಿಸ್ತರಣೆ ಆಗಲ್ಲ. ಇದಕ್ಕೆ ಹಲವಾರು ಕಾರಣಗಳಿವೆ ಎಂದು ಗಣೇಶ್‌ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ