ಆ್ಯಪ್ನಗರ

ಸಿದ್ದರಾಮಯ್ಯ ಮುಂದಿನ ಸಿಎಂ ಆಗಲಿ, ಇದು ರಾಜ್ಯದ ಜನರ ಅಭಿಪ್ರಾಯ: ಶಾಸಕ ರಾಮಪ್ಪ

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡಾ ಸಿಎಂ ಯಾರು ಎಂದು ಹೇಳಿಕೆ ಕೊಟ್ಟ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆಯೂ ರಾಮಪ್ಪ, ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿಕೆ ನೀಡಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 23 Jun 2021, 1:42 pm

ಹೈಲೈಟ್ಸ್‌:

  • ಈ ಹಿಂದೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಚಾಮರಾಜಪೇಟೆ ಶಾಸಕ ಜಮೀರ್ ಸಿದ್ದು ಪರ ಮಾತನಾಡಿದ್ದರು
  • ಕಂಪ್ಲಿ ಶಾಸಕ ಗಣೇಶ್ ಕೂಡಾ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದರು
  • ಇದೀಗ ಹರಿಹರ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಸಿದ್ದು ಪರ ಹೇಳಿಕೆ ನೀಡಿದ್ದಾರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ramappa
ಸಿದ್ದರಾಮಯ್ಯ ಮುಂದಿನ ಸಿಎಂ ಆಗಲಿ, ಇದು ರಾಜ್ಯದ ಜನರ ಅಭಿಪ್ರಾಯ: ಶಾಸಕ ರಾಮಪ್ಪ
ಬೆಂಗಳೂರು: ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಈ ಬೇಡಿಕೆಗೆ ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕ ದನಿಗೂಡಿಸಿದ್ದಾರೆ.
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್, ಕಂಪ್ಲಿ ಶಾಸಕ ಗಣೇಶ್ ಅವರು ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಬ್ಯಾಟಿಂಗ್ ಬೀಸಿದ್ದರು. ಇದೀಗ ಅವರ ಸಾಲಿಗೆ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸೇರ್ಪಡೆಯಾಗಿದ್ದಾರೆ.

ಸಿದ್ದರಾಮಯ್ಯ ನಿವಾಸಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ್ದ ಶಾಸಕ ರಾಮಪ್ಪ ಮಾಧ್ಯಮಗಳಿಗೆ ಮಾತನಾಡಿ, ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು. ರಾಜ್ಯದ ಜನರ ಅಭಿಪ್ರಾಯ ಇದೇ ಆಗಿದೆ. ನಮ್ಮ ಶಾಸಕರ ಅಭಿಪ್ರಾಯವೂ ಇದೇ ಆಗಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಇನ್ನೂ ವಯಸ್ಸಿದೆ. ಅವರು ಮುಂದೆ ಬೇಕಾದರೆ ಸಿಎಂ ಆಗಬಹುದು. 2023ಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು. ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದಕ್ಕೆ ಅವರೇ ಆದರೆ ಒಳ್ಳೆಯದು ಎಂಬುದು ನಮ್ಮ ಆಸೆ. ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಇನ್ನು ಶಾಸಕರ ಬೇಡಿಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಸಿಎಂ ಅಂತ ಶಾಸಕರುಗಳು ಹೇಳಿದರೆ ನಾನೇನು ಮಾಡೋಕೆ ಆಗಲ್ಲ. ಅದಕ್ಕೂ ನನಗೆ ಸಂಬಂಧ ಇಲ್ಲ ಎಂದು ಹೇಳಿ ತೆರಳಿದ್ದರು.

ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳಿಲ್ಲ, ಯಾರ ಬಳಿಯಲ್ಲೂ ಹೇಳಿಸಿಲ್ಲ: ಸಿದ್ದರಾಮಯ್ಯ
ಈಗಾಗಲೇ ದಿಲ್ಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಂದಿನ ಸಿಎಂ ವಿಚಾರದಲ್ಲಿ ಯಾವುದೇ ನಾಯಕರು ತಮ್ಮ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಖಂಡತುಂಡವಾಗಿ ಹೇಳಿದ ಅಖಂಡ: 'ಜನ ಬಯಕೆ' ಹೇಳಿದ ಶ್ರೀನಿವಾಸ್ ಮೂರ್ತಿ!
ಅಲ್ಲದೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡಾ ಸಿಎಂ ಯಾರು ಎಂದು ಹೇಳಿಕೆ ಕೊಟ್ಟ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ ರಾಮಪ್ಪ, ಅಖಂಡ ಶ್ರೀನಿವಾಸ್ ಮೂರ್ತಿ ಹೈಕಮಾಂಡ್ ಹೇಳಿದ್ರೂ ಡೋಂಟ್ ಕೇರ್ ಅಂತ ತಮ್ಮ ಹೇಳಿಕೆ ನೀಡಿದ್ದಾರೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ