ಆ್ಯಪ್ನಗರ

ನಳಿನ್ ಕುಮಾರ್ ಕಟೀಲ್ ಕಾಮಿಡಿ ಪೀಸ್ - ಸಿದ್ದರಾಮಯ್ಯ ಕುಹಕ

ಡಿಕೆ ಶಿವಕುಮಾರ್ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಟ್ವಟರ್ ನಲ್ಲಿ ನಳಿನ್ ಆರೋಪಕ್ಕೆ ಕಿಡಿಕಾರಿರುವ ಸಿದ್ದರಾಮಯ್ಯ ನಳಿನ್ ಬಿಜೆಪಿಯ ಕಾಮಿಡಿ ಪೀಸ್ ಎಂದು ಕುಹುಕವಾಡಿದ್ದಾರೆ.

Vijaya Karnataka Web 9 Sep 2019, 3:31 pm
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಮಿಡಿ ಪೀಸ್ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕುಹುಕವಾಡಿದ್ದಾರೆ. ಟ್ವಿಟರ್ ನಲ್ಲಿ ಕಟೀಲ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ , ರಾಜ್ಯ ಬಿಜೆಪಿ ನಾಟಕ‌ ಮಂಡಳಿಗೆ ಕಾಮಿಡಿ ಪಾತ್ರದ ಅಗತ್ಯ ಇತ್ತು, ಅದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಪಕ್ಷಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
Vijaya Karnataka Web siddaramayya



ನಳಿನ್ ಕುಮಾರ್ ಕಟೀಲ್ ಅವರನ್ನು ಅವರ ಪಕ್ಷದವರೂ ಸೇರಿದಂತೆ ಯಾರೂ ಸೀರಿಯಸ್ಸಾಗಿ ತಗೊಳ್ತಿಲ್ಲ, ಅದಕ್ಕಾಗಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ ಎಂದು ಸಿದ್ದು ಗರಂ ಆಗಿದ್ದಾರೆ. ಇದಕ್ಕಿಂತ ಮೊದಲು ಟ್ವೀಟ್ ಮಾಡಿದ್ದ ಅವರು, ನಳಿನ್ ಕುಮಾರ್ ಕಟೀಲ್‌ಗೆ ಸಾಮಾನ್ಯ ಜ್ಞಾನವೂ ಇಲ್ಲ, ಇದುವರೆಗೂ ಬಿಜೆಪಿ ಬೇರೆ ಬೇರೆ ಕೋಮುಗಳ ನಡುವೆ ಬೆಂಕಿಹಚ್ಚಿ ತನ್ನ ಸ್ವಾರ್ಥ ಸಾಧಿಸಿಕೊಳ್ಳುತ್ತಿತ್ತು. ಈಗ ತನ್ನ ಎದುರಾಳಿ ನಾಯಕರ ನಡುವೆ ಹುಳಿ ಹಿಂಡುವ ಹೀನ ಕಾರ್ಯಕ್ಕೆ ಇಳಿದಿದೆ ಎಂದು ಕಿಡಿಕಾರಿದ್ದರು.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದರು.
ಡಿಕೆಶಿ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ!: ಕಟೀಲ್ ಬಾಂಬ್ಬಾಗಲಕೋಟೆಯಲ್ಲಿ ಮಾತನಾಡಿದ್ದ ಅವರು, ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಲು ಸಿದ್ದರಾಮಯ್ಯ ಕಾರಣ. ಡಿಕೆಶಿ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಳಿನ್ ಆರೋಪ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ