ಆ್ಯಪ್ನಗರ

ಬಾಂಬೆ ಸೂಟ್‌ಕೇಸ್‌ ಪ್ರಕರಣದ ಬಗ್ಗೆ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ

ನನಗೆ ತಂದಿದ್ದ ದೊಡ್ಡ ಮೊತ್ತದ ಹಣ ಇರುವ ಸೂಟ್‌ಕೇಸ್‌ ಬೇರೆಯವರ ಪಾಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ಹೇಳಿರುವ ಹಿನ್ನೆಲೆಯಲ್ಲಿ ಈ ಕುರಿತು ಲೋಕಾಯುಕ್ತ ತನಿಖೆಯಾಗಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vijaya Karnataka Web 3 Dec 2020, 6:43 pm
ಮೈಸೂರು: ನನಗೆ ತಂದಿದ್ದ ದೊಡ್ಡ ಮೊತ್ತದ ಹಣ ಇರುವ ಸೂಟ್‌ಕೇಸ್‌ ಬೇರೆಯವರ ಪಾಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ಹೇಳಿರುವ ಹಿನ್ನೆಲೆಯಲ್ಲಿ ಈ ಕುರಿತು ಲೋಕಾಯುಕ್ತ ತನಿಖೆಯಾಗಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Vijaya Karnataka Web siddaramaiah
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)


ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡ ಮೊತ್ತದ ಹಣ ತಂದಿದ್ದರು ಎಂದು ನಾನು ಹೇಳುತ್ತಿಲ್ಲ. ಸ್ವತಃ ವಿಶ್ವನಾಥ್‌ ಅವರೇ ಹೇಳಿದ್ದಾರೆ. ಆ ಮೊತ್ತದ ಸೂಟ್‌ಕೇಸ್‌ ಅನ್ನು ಸಿ.ಪಿ. ಯೋಗೇಶ್ವರ್‌ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌. ಸಂತೋಷ್‌ ತೆಗೆದುಕೊಂಡು ಹೋಗಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಕುರುಬರಿಗೆ ಮೀಸಲಾತಿ ವಿಚಾರದಲ್ಲಿ ನಾನೇ ಟಾರ್ಗೆಟ್: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಹಾಗಾದರೆ ಇದು ಕೇವಲ ಒಂದು ಕ್ಷೇತ್ರಕ್ಕೆ ಸಂಬಂಧಿಸಿದಲ್ಲ. ರಾಜೀನಾಮೆ ನೀಡಿದ ಎಲ್ಲ ಶಾಸಕರ ಕ್ಷೇತ್ರಕ್ಕೂ ಸಂಬಂಧಿಸಿದೆ. ಈ ದೊಡ್ಡ ಮೊತ್ತವನ್ನು ನೀಡಿದವರು ಯಾರು? ಅದು ಕಾನೂನು ಬದ್ಧ ಹಣವೇ? ಕಪ್ಪು ಹಣವೇ? ಅದು ಎಲ್ಲಿ ಹೋಯಿತು ಎನ್ನುವ ಕುರಿತು ಲೋಕಾಯುಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಬಹುಸಂಖ್ಯಾತರ ಓಲೈಸಲು ಬಿಜೆಪಿ ಲವ್ ಜಿಹಾದ್ ಕಾನೂನು ತರ್ತಿದೆ: ಯತೀಂದ್ರ ಸಿದ್ದರಾಮಯ್ಯ

ರಾಜ್ಯದಲ್ಲಿ ಸರಕಾರವೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರಕಾರ ಇನ್ನೂ ಟೇಕಾಫ್‌ ಆಗಲಿಲ್ಲ. ಈಗ ಇರುವ ಸರಕಾರದ ಮುಖ್ಯಮಂತ್ರಿ ಬದಲಾವಣೆ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ