ಬೆಂಗಳೂರು: ಸರ್ಕಾರ ರೈತರಿಗೆ ಹೊಸದಾಗಿ ಬಡ್ಡಿ ರಹಿತ ಸಾಲ ಕೊಡಬೇಕು. ರೈತರು ಈಗಾಗಲೇ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಪರಿಹಾರಕ್ಕಾಗಿ ಸರ್ಕಾರ ಪ್ರಕಟಿಸಿರುವ ಪರಿಹಾರ ಧನ ತೃಪ್ತಿದಾಯಕವಾಗಿಲ್ಲ. ಲಕ್ಷಾಂತರ ರೂ. ಖರ್ಚು ಮಾಡಿ ಹೂ ಬೆಳೆದ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 25 ಸಾವಿರ ರೂ.ಪರಿಹಾರ ಸಾಕಾಗುವುದಿಲ್ಲ. ಅಲ್ಲದೇ ನೇಕಾರರು, ಅಗಸ, ಸವಿತಾ ಆಟೋ, ಕ್ಯಾಬ್ ಚಾಲಕರನ್ನು ಮಾತ್ರ ಪರಿಹಾರದಡಿ ಸೇರಿಸಿ ಬಹುತೇಕ ಸಂಘಟಿತ-ಅಸಂಘಟಿತ ಕಾರ್ಮಿಕರನ್ನೆಲ್ಲ ಕೈಬಿಡಲಾಗಿದೆ. ಕೈಬಿಟ್ಟಿರುವ ಎಲ್ಲಾ ಸಮುದಾಯಕ್ಕೂ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಇರುವ ಆರ್ಥಿಕ ಸ್ಥಿತಿಯಲ್ಲಿ ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಹೇಗೆ ನಿಭಾಯಿಸಬೇಕು ಎಂದು ಸಲಹೆ ಕೊಡಲು ಪ್ರತಿಪಕ್ಷ ಸಿದ್ಧವಿದೆ. ಇದಕ್ಕಾಗಿ ಸರ್ಕಾರ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯಬೇಕು. ಅಧಿವೇಶನ ಕರೆದರೆ ಸೂಕ್ತ ಸಲಹೆ ಕೊಡುತ್ತೇವೆ ಎಂದರು.
ಕೊರೊನಾವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು, ಸಿದ್ದರಾಮಯ್ಯ ಆಗ್ರಹ
ಕೇರಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನರಿಗೆ ದೊಡ್ಡ ಮೊತ್ತದ ಪರಿಹಾರ ಕೊಟ್ಟಿದ್ದಾರೆ. ರಾಜ್ಯದ ಕೊರೊನಾ ಪರಿಹಾರಕ್ಕಾಗಿ ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ಕೇಂದ್ರ ಸರ್ಕಾರದಿಂದ ದೊಡ್ಡ ಮೊತ್ತದ ಪ್ಯಾಕೇಜ್ ತರಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ನಡೆಸಬೇಕೆಂದು ಆಗ್ರಹಿಸಿದರು.
ಮುಂದಿನ ಜೂನ್, ಜುಲೈ. ಅಗಸ್ಟ್ ಈ ತಿಂಗಳುಗಳು ಬಹಳ ಗಂಭೀರ ಮತ್ತು ಸೂಕ್ಷ್ಮವಾಗಿದ್ದು, ರಾಜ್ಯದಲ್ಲಿ ಇನ್ಮಷ್ಟು ಕೊರೊನಾ ಪ್ರಕರಣಗಳು ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.
ಇದಕ್ಕು ಮುನ್ನ ವಿರೋಧ ಪಕ್ಷಗಳ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಕ್ಕೋತ್ತಾಯ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆಗೆ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಬಣ ಆಗುತ್ತಿರಲಿಲ್ಲ ಎಂದರು.
ಸಾರಿಗೆ ನೌಕರರೇ ಸಂಬಳದ ಚಿಂತೆ ಬಿಡಿ, ಕೆಲವೇ ದಿನಗಳಲ್ಲಿ ನಿಮ್ಮ ಜೇಬಿಗೆ ಸ್ಯಾಲರಿ!
ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆಗೆ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಬಣ ಆಗುತ್ತಿರಲಿಲ್ಲ. ವಿಮಾನಗಳ ಹಾರಾಟ ಮೊದಲೇ ನಿಲ್ಲಿಸಿ ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕಿತ್ತು. ಈ ನಿಟ್ಟಿನಲ್ಲಿಕೊರೋನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದರು.
ಇರುವ ಆರ್ಥಿಕ ಸ್ಥಿತಿಯಲ್ಲಿ ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಹೇಗೆ ನಿಭಾಯಿಸಬೇಕು ಎಂದು ಸಲಹೆ ಕೊಡಲು ಪ್ರತಿಪಕ್ಷ ಸಿದ್ಧವಿದೆ. ಇದಕ್ಕಾಗಿ ಸರ್ಕಾರ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯಬೇಕು. ಅಧಿವೇಶನ ಕರೆದರೆ ಸೂಕ್ತ ಸಲಹೆ ಕೊಡುತ್ತೇವೆ ಎಂದರು.
ಕೊರೊನಾವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು, ಸಿದ್ದರಾಮಯ್ಯ ಆಗ್ರಹ
ಕೇರಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನರಿಗೆ ದೊಡ್ಡ ಮೊತ್ತದ ಪರಿಹಾರ ಕೊಟ್ಟಿದ್ದಾರೆ. ರಾಜ್ಯದ ಕೊರೊನಾ ಪರಿಹಾರಕ್ಕಾಗಿ ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ಕೇಂದ್ರ ಸರ್ಕಾರದಿಂದ ದೊಡ್ಡ ಮೊತ್ತದ ಪ್ಯಾಕೇಜ್ ತರಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ನಡೆಸಬೇಕೆಂದು ಆಗ್ರಹಿಸಿದರು.
ಮುಂದಿನ ಜೂನ್, ಜುಲೈ. ಅಗಸ್ಟ್ ಈ ತಿಂಗಳುಗಳು ಬಹಳ ಗಂಭೀರ ಮತ್ತು ಸೂಕ್ಷ್ಮವಾಗಿದ್ದು, ರಾಜ್ಯದಲ್ಲಿ ಇನ್ಮಷ್ಟು ಕೊರೊನಾ ಪ್ರಕರಣಗಳು ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.
ಇದಕ್ಕು ಮುನ್ನ ವಿರೋಧ ಪಕ್ಷಗಳ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಕ್ಕೋತ್ತಾಯ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆಗೆ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಬಣ ಆಗುತ್ತಿರಲಿಲ್ಲ ಎಂದರು.
ಸಾರಿಗೆ ನೌಕರರೇ ಸಂಬಳದ ಚಿಂತೆ ಬಿಡಿ, ಕೆಲವೇ ದಿನಗಳಲ್ಲಿ ನಿಮ್ಮ ಜೇಬಿಗೆ ಸ್ಯಾಲರಿ!
ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆಗೆ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಬಣ ಆಗುತ್ತಿರಲಿಲ್ಲ. ವಿಮಾನಗಳ ಹಾರಾಟ ಮೊದಲೇ ನಿಲ್ಲಿಸಿ ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕಿತ್ತು. ಈ ನಿಟ್ಟಿನಲ್ಲಿಕೊರೋನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದರು.