ಆ್ಯಪ್ನಗರ

ಈ ತಿಂಗಳ ಅಂತ್ಯದೊಳಗೆ ಮತ್ತೆ ಭಾಗ್ಯಗಳ ಸರಕಾರ ಬರಲಿದೆ: ಎಂ.ಬಿ ಪಾಟೀಲ್‌

ಬಿಜೆಪಿ ಸರಕಾರ ಉಪ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿದೆ. ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ವಿಪಕ್ಷಗಳು ಬಿಜೆಪಿ ಸರಕಾರ ಉರುಳಲಿದ್ದು, ಮತ್ತೆ ಜೆಡಿಎಸ್‌ ಕಾಂಗ್ರೆಸ್ ಸರಕಾರ ಬರಲಿದೆ. ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಹೇಳುತ್ತಿದ್ದಾರೆ.

Vijaya Karnataka Web 2 Dec 2019, 1:06 pm
ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ರಾಜ್ಯ ರಾಜಕಿಯದಲ್ಲಿ ಬದಲಾವಣೆ ಕಾಣಲಿದೆ ಎಂದು ಹಲವು ರಾಜಕೀಯ ನಾಯಕರು ಮಾತನ್ನಾಡುತ್ತಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಮತ್ತೆ ಸಿದ್ದರಾಮಯ್ಯ ಸಿಎಂ ಆಗುವ ಮುನ್ಸೂಚನೆ ನೀಡಿದ್ದಾರೆ.
Vijaya Karnataka Web mb patil


''ಈ ತಿಂಗಳ ಅಂತ್ಯದೊಳಗೆ ಮತ್ತೆ ಭಾಗ್ಯಗಳ ಸರಕಾರ ಬರಲಿದೆ. ಇತ್ತೀಚಿಗೆ ಸರಕಾರ ಇದೆಯೋ ಇಲ್ಲವೋ ಎಂದಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಮತ್ತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ'' ಎಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್‌ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್‌ ಮಾಡಿದ್ದಾರೆ.


ಈ ಮೂಲಕ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಎಂ.ಬಿ. ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ. ಹಲವು ಭಾಗ್ಯಗಳನ್ನು ನೀಡಿದ್ದ ಸಿದ್ದರಾಮಯ್ಯ ಸರಕಾರ ಮತ್ತೆ ಡಿಸೆಂಬರ್‌ ತಿಂಗಳ ಅಂತ್ಯದಲ್ಲಿ ಬರಲಿದೆ ಎನ್ನುವಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಈ ಸುದ್ದಿ ಓದಿ: ನನ್ನ ವಿರುದ್ಧ ಯಾರೇ ಸ್ಪರ್ಧೆ ಮಾಡಿದ್ರೂ ಠೇವಣಿ ಕಳೆದುಕೊಳ್ತಾರೆ! ಎಂಬಿ ಪಾಟೀಲ್ ರಣೋತ್ಸಾಹದ ಮಾತು

ಮಾಜಿ ಸಿಎಂ ಸಿದ್ದರಾಮಯ್ಯ ಸಹ ಇತ್ತೀಚೆಗೆ ಮತ್ತೆ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆಯಾಗಲಿದೆ ಎಂಬ ಸುಳಿವು ನೀಡಿದ್ದರು. ಅಲ್ಲದೆ, ಜೆಡಿಎಸ್ - ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿ ಸರಕಾರ ಪತನವಾಗಲಿದೆ ಎಂದೇ ಹೇಳುತ್ತಿದ್ದಾರೆ. ಇದೇ ರೀತಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕ ಎಂ.ಬಿ. ಪಾಟೀಲ್‌ ಟ್ವೀಟ್‌ ಮಾಡಿದ್ದು, ಅವರ ಈ ಟ್ವೀಟ್‌ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬಿಜೆಪಿ 15 ಸ್ಥಾನ ಗೆದ್ದರೆ ಸಿದ್ದು ರಾಜೀನಾಮೆ ಕೊಡ್ತಾರಾ?

ಸಿದ್ದರಾಮಯ್ಯ ಜತೆ ಯಾರ್ರೀ ಹೋಗ್ತಾರೆ? ಮೈತ್ರಿ ಬಗ್ಗೆ ದೇವೇಗೌಡರ ಪ್ರಶ್ನೆ!

ಉಪ ಚುನಾವಣೆ: ಬಿಜೆಪಿ ಸರಕಾರ ಉಳಿಯುತ್ತಾ? ರಾಜಕೀಯ ಸಾಧ್ಯಾಸಾಧ್ಯತೆಗಳಿವು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ