ಆ್ಯಪ್ನಗರ

ಝೆಡ್‌ ಪ್ಲಸ್‌ ಭದ್ರತೆ ಬೇಕು ! ಬಿಎಸ್‌ವೈಗೆ ಪತ್ರ ಬರೆದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ಝೆಡ್‌ ಪ್ಲಸ್‌ ಭದ್ರತೆಯನ್ನು ವಾಪಸ್‌ ಪಡೆದುಕೊಳ್ಳಲಾಗಿದ್ದು ಈ ವಿಚಾರವಾಗಿ ಸಿಎಂ ಬಿಎಸ್‌ವೈಗೆ ಅವರು ಪತ್ರವನ್ನು ಬರೆದಿದ್ದಾರೆ.

Vijaya Karnataka Web 16 Mar 2020, 3:17 pm
ಬೆಂಗಳೂರು: ಝೆಡ್‌ ಪ್ಲಸ್‌ ಭದ್ರತೆಯನ್ನು ನೀಡುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ. ಮುಖ್ಯಮಂತ್ರಿಯಾದ್ದ ಅವಧಿಯಿಂದ ಸಿದ್ದರಾಮಯ್ಯ ಅವರಿಗೆ ಝೆಡ್‌ ಪ್ಲಸ್‌ ಭದ್ರತೆಯನ್ನು ನೀಡಲಾಗಿತ್ತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾಗಲೂ ಝೆಡ್‌ ಪ್ಲಸ್‌ ಶ್ರೇಣಿಯ ಭದ್ರತೆ ಮುಂದುವರಿದಿತ್ತು.
Vijaya Karnataka Web siddaramaiah with escort


ಆದರೆ ಮಾರ್ಚ್‌ 16 (ಸೋಮವಾರ) ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ಝೆಡ್‌ ಪ್ಲಸ್‌ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವಾಗ ಸುರಕ್ಷತೆಯ ದೃಷ್ಟಿಯಲ್ಲಿ ಭದ್ರತೆಯನ್ನು ವಾಪಸ್‌ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿಎಸ್‌ವೈಗೆ ಪತ್ರವನ್ನು ಬರೆದಿದ್ದಾರೆ.

ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ, ಒಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗುರಿ ಎಂದ ಡಿಕೆಶಿ

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರುಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಸರ್ಕಾರ ಹಿಂದಕ್ಕೆ ಪಡೆದಿತ್ತು. ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಬಿ ಭದ್ರತಾ ಶ್ರೇಣಿಯನ್ನು ಹೊಂದಿದ್ದ 27 ಸಚಿವರ ಭದ್ರತೆಯನ್ನು ವಾಪಸ್‌ ಪಡೆದುಕೊಳ್ಳಲಾಗಿತ್ತು.

ಆದರೆ ಅದೇ ಅವಧಿಯಲ್ಲಿ ಎ ಶ್ರೇಣಿಯ ಭದ್ರತೆಯನ್ನು ಹೊಂದಿದ್ದ ಮಾಜಿ ಸಚಿವರ ಭದ್ರತೆಯನ್ನು ಮುಂದುವರಿಸಲಾಗಿತ್ತು. ಇದೀಗ ವಿರೋಧ ಪಕ್ಷದ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ಝೆಡ್ ಪ್ಲಸ್‌ ಭದ್ರತೆಯನ್ನು ಹಿಂಪಡೆಯಲಾಗಿದೆ.

ಈ ಹಿಂದೆ ಕಾವೇರಿ ನಿವಾಸದಲ್ಲಿ ಉಳಿದುಕೊಳ್ಳಲು ಅವಕಾಶ ನೀಡುವಂತೆ ಕೋರಿ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪನವರಿಗೆ ಪತ್ರವನ್ನು ಬರೆದಿದ್ದರು. ಆದರೆ ಇದಕ್ಕೆ ಸರ್ಕಾರ ಒಪ್ಪಿಗೆ ನೀಡದಿದ್ದ ಕಾರಣಕ್ಕಾಗಿ ಕಾವೇರಿ ನಿವಾಸವನ್ನು ಕೊನೆಗೂ ತೊರೆಯಬೇಕಾಗಿ ಬಂದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ