ಆ್ಯಪ್ನಗರ

ನಾನು, ಬಿಎಸ್‌ವೈ ಒಳ್ಳೇ ಗೆಳೆಯರು ಕಣ್ರೀ: ಸಿದ್ದರಾಮಯ್ಯ

ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರಿತು ಸಿದ್ದರಾಮಯ್ಯ ತಮ್ಮ ಫೇಸ್‌ಬುಕ್‌ ಖಾತೆಯ ಗೋಡೆಯ ಮೇಲೆ ಬರೆದುಕೊಂಡಿದ್ದಾರೆ.

Vijaya Karnataka Web 25 Feb 2019, 6:21 pm
ಹುಬ್ಬಳ್ಳಿ: ಸದಾ ರಾಜಕೀಯ ಕೆಸರೆರಚಾಟದಲ್ಲಿ ಮಿಂದೇಳುತ್ತಿದ್ದ ರಾಜ್ಯದ ಇಬ್ಬರು ಮಹಾನ್ ನಾಯಕರು ಪರಸ್ಪರ ಉಭಯ ಕುಶಲೋಪರಿ ನಡೆಸಿದರು.
Vijaya Karnataka Web ಸಿದ್ದರಾಮಯ್ಯ, ಯಡಿಯೂರಪ್ಪ
ಸಿದ್ದರಾಮಯ್ಯ, ಯಡಿಯೂರಪ್ಪ


ರಾಜ್ಯದ ಘಟಾನುಘಟಿ ನಾಯಕರಾದ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ, ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪರಸ್ಪರ ಭೇಟಿಯಾದರು.

ಪರಸ್ಪರ ವಾಗ್ದಾಳಿ ನಡೆಸುತ್ತಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ ಕೆಲವು ನಿಮಿಷಗಳ ಕಾಲ ಕುಶಲೋಪರಿ ನಡೆಸಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಉಭಯ ನಾಐಕರು ವಿಮಾನ ನಿಲ್ದಾಣದಲ್ಲಿ ಭೇಟಿಯಾದರು.


ಒಬ್ಬರಿಗೊಬ್ಬರು ಹಸ್ತಲಾಘವ ಮಾಡಿ, ಆತ್ಮೀಯವಾಗಿ ಮಾತುಕತೆ ನಡೆಸಿದರು.

ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರಿತು ಸಿದ್ದರಾಮಯ್ಯ ತಮ್ಮ ಫೇಸ್‌ಬುಕ್‌ ಖಾತೆಯ ಗೋಡೆಯ ಮೇಲೆ ಬರೆದುಕೊಂಡಿದ್ದಾರೆ.

ರಾಜಕೀಯದ ಹೊರತಾಗಿ ನಾನು ಮತ್ತು ಯಡಿಯೂರಪ್ಪ ಅತ್ಯಂತ ಆಪ್ತ ಸ್ನೇಹಿತರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ