ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಏರ್ಪಡಿಸಿದ್ದ ಭೋಜನಕೂಟದಿಂದ ಕಾಂಗ್ರೆಸ್ನ ಅತೃಪ್ತ ಶಾಸಕರು ದೂರ ಉಳಿದಿದ್ದಾರೆ.
ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಶಾಸಕರು ಹಾಗೂ ಪರಾಭವಗೊಂಡ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದರು. ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಸಂಜೆ ಏರ್ಪಾಡು ಮಾಡಿದ್ದ ಈ ಭೋಜನಕೂಟಕ್ಕೆ ಆಗಮಿಸುವಂತೆ ಎಲ್ಲರಿಗೂ ಆಹ್ವಾನ ನೀಡಲಾಗಿತ್ತು.
ಆದರೆ, ಸಚಿವ ಸ್ಥಾನದ ಆಕಾಂಕ್ಷಿಗಳಾದ ರೋಷನ್ ಬೇಗ್, ರಾಮಲಿಂಗಾರೆಡ್ಡಿ, ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ್, ಎಚ್.ಕೆ.ಪಾಟೀಲ್ ಈ ಭೋಜನಕೂಟದಿಂದ ಅಂತರ ಕಾಯ್ದುಕೊಂಡರು. ಡಿಸಿಎಂ ಡಾ.ಜಿ. ಪರಮೇಶ್ವರ ಸೇರಿದಂತೆ ಸಂಪುಟದ ಬಹುತೇಕ ಸಚಿವರು ಹಾಗೂ ಇತರ ಶಾಸಕರು ಹೋಗಿದ್ದರು ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಶಾಸಕರು ಹಾಗೂ ಪರಾಭವಗೊಂಡ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದರು. ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಸಂಜೆ ಏರ್ಪಾಡು ಮಾಡಿದ್ದ ಈ ಭೋಜನಕೂಟಕ್ಕೆ ಆಗಮಿಸುವಂತೆ ಎಲ್ಲರಿಗೂ ಆಹ್ವಾನ ನೀಡಲಾಗಿತ್ತು.
ಆದರೆ, ಸಚಿವ ಸ್ಥಾನದ ಆಕಾಂಕ್ಷಿಗಳಾದ ರೋಷನ್ ಬೇಗ್, ರಾಮಲಿಂಗಾರೆಡ್ಡಿ, ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ್, ಎಚ್.ಕೆ.ಪಾಟೀಲ್ ಈ ಭೋಜನಕೂಟದಿಂದ ಅಂತರ ಕಾಯ್ದುಕೊಂಡರು. ಡಿಸಿಎಂ ಡಾ.ಜಿ. ಪರಮೇಶ್ವರ ಸೇರಿದಂತೆ ಸಂಪುಟದ ಬಹುತೇಕ ಸಚಿವರು ಹಾಗೂ ಇತರ ಶಾಸಕರು ಹೋಗಿದ್ದರು ಎಂದು ತಿಳಿದು ಬಂದಿದೆ.