ಆ್ಯಪ್ನಗರ

ಜ.20ಕ್ಕೆ ಕೇಂದ್ರ ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನಿಂದ ರಾಜ ಭವನಕ್ಕೆ ಮುತ್ತಿಗೆ

ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಕಾಯಿದೆ ಹಿಂಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೂ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ತೀರ್ಮಾನಿಸಿದೆ.

Vijaya Karnataka Web 16 Jan 2021, 8:41 pm
ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಕಾಯಿದೆ ಹಿಂಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೂ ಕಾಂಗ್ರೆಸ್‌ ವತಿಯಿಂದ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ನಡೆಸಲಾಗುವುದು ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದರು.
Vijaya Karnataka Web congress


''ಜ. 20ರ ಬೆಳಗ್ಗೆ 10ಕ್ಕೆ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದು, ಕೆಪಿಸಿಸಿ, ಪಕ್ಷದ ಸ್ಥಳೀಯ ಸದಸ್ಯರು, ಪದಾಧಿಕಾರಿಗಳು, ಮಾಜಿ ಹಾಗೂ ಹಾಲಿ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ'' ಎಂದು ಸುದ್ದಿಗೋಷ್ಠಿಯಲ್ಲಿಶನಿವಾರ ತಿಳಿಸಿದರು.

''ದಿಲ್ಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸಲು ನಮ್ಮ ಪಕ್ಷ ರಾಜಭವನಕ್ಕೆ ಮುತ್ತಿಗೆ ಹಾಕುತ್ತಿದೆ. ಅದೇ ದಿನ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಈ ಕಾರ್ಯಕ್ರಮ ನಡೆಯುತ್ತದೆ'' ಎಂದರು.

ಜ. 18 ರಿಂದ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಜಾರಿ; ಗೋವುಗಳ ಹತ್ಯೆ, ಅಕ್ರಮ ಸಾಗಾಟ ಸಂಪೂರ್ಣ ನಿಷೇಧ

''ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರ ಸರಕಾರ ಮಾತುಕತೆ ನಡೆಸುತ್ತಿದೆಯೇ ಹೊರತು ತನ್ನ ನಿರ್ಧಾರದಿಂದ ಹಿಂದೆ ಬರಲು ತಯಾರಿಲ್ಲ. ಆದ್ದರಿಂದಲೇ 9 ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಇಲ್ಲಿವರೆಗೆ 60ಕ್ಕೂ ಹೆಚ್ಚು ರೈತರು ಅಸುನೀಗಿದ್ದಾರೆ. ಇಷ್ಟೆಲ್ಲಾಆಗುತ್ತಿದ್ದರೂ ಸರಕಾರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ವಿರೋಧ ಪಕ್ಷಗಳಿಗೆ ಮಾತ್ರವಲ್ಲದೆ ಜನರ ಪ್ರಶ್ನೆಗಳಿಗೂ ಕೇಂದ್ರ ಉತ್ತರಿಸುತ್ತಿಲ್ಲ'' ಎಂದು ವಾಗ್ದಾಳಿ ನಡೆಸಿದರು.

ಕೋವಿಡ್‌ ಲಸಿಕೆ: ಯಾವುದೇ ಆತಂಕ, ಭಯದ ಅಗತ್ಯ ಇಲ್ಲ ಎಂದ ಬಿಎಸ್‌ವೈ

ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಮಾತನಾಡಿ, ''ದೇಶದ ಗಡಿಯಲ್ಲಿ5 ಲಕ್ಷಕ್ಕೂ ಹೆಚ್ಚು ರೈತರು 94 ಸಾವಿರಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಲ್ಲಿರಾರ‍ಯಲಿ ಮಾಡುತ್ತಿದ್ದಾರೆ. ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿಆಗುವ ಘಟನೆಗಳ ಬಗ್ಗೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ಮೋದಿ ತಮ್ಮ ಮನೆಯ ಬಳಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡುತ್ತಿಲ್ಲ'' ಎಂದು ದೂರಿದರು.

ಆಪರೇಷನ್‌ ಕಮಲಕ್ಕೆ ಸಾಲ, ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ತನಿಖೆಯಾಗಲಿ; ಸಿದ್ದರಾಮಯ್ಯ ಆಗ್ರಹ

''ರಾಜ್ಯಸಭೆಯಲ್ಲಿಈ ಕಾಯಿದೆ ಜಾರಿಗೆ ವಿರೋಧಿಸಿದವರಲ್ಲಿನಾನೂ ಒಬ್ಬ. ನಮ್ಮ ಸಹಕಾರ ಸಿಗುವುದಿಲ್ಲಎಂದು ತಿಳಿದ ತಕ್ಷಣ ಧ್ವನಿ ಮತದ ಮೂಲಕ ಅಂಗೀಕರಿಸಲು ನಿರ್ಧರಿಸಲಾಯಿತು. ಈಗ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ರಾಜಭವನಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ'' ಎಂದರು.

ಸಮ್ಮಿಶ್ರ ಸರಕಾರ ಪತನಕ್ಕೆ ಯೋಗೀಶ್ವರ್‌ 9 ಕೋಟಿ ಸಾಲ, ಎಸಿಬಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್‌, ವಿಧಾನ ಪರಿಷತ್‌ ಸದಸ್ಯ ಧರ್ಮಸೇನ, ಆರ್‌.ಶಿವಣ್ಣ, ಹೆಡತಲೆ ಮಂಜುನಾಥ್‌, ಹರೀಶ್‌ ಗೌಡ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ