ಮಂಡ್ಯ: ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಆವರಣದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಸಮಾವೇಶ ಹಾಗೂ ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಜನರನ್ನು ಹಣ ಮತ್ತು ಬೆಳ್ಳಿ ನಾಣ್ಯ ಕೊಟ್ಟುಕರೆತರಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದೆ. ಸಮಾವೇಶಕ್ಕೆ ಬರುವ ಜನರಿಗೆ ಹಣ ಮತ್ತು ಬೆಳ್ಳಿ ನಾಣ್ಯದ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಲಾಗಿದೆ.
ಸಮಾವೇಶಕ್ಕೆ ಬಂದವರಿಗೆ ಬೆಳ್ಳಿ ನಾಣ್ಯ?
ಕಾಂಗ್ರೆಸ್ನ ಸಾಧನಾ ಸಮಾವೇಶಕ್ಕೆ ಜನರನ್ನು ಹಣ ಮತ್ತು ಬೆಳ್ಳಿ ನಾಣ್ಯ ಕೊಟ್ಟು ಕರೆತರಲಾಗಿತ್ತು
Vijaya Karnataka 13 Jan 2018, 8:56 am
ಮಂಡ್ಯ: ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಆವರಣದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಸಮಾವೇಶ ಹಾಗೂ ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಜನರನ್ನು ಹಣ ಮತ್ತು ಬೆಳ್ಳಿ ನಾಣ್ಯ ಕೊಟ್ಟುಕರೆತರಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದೆ. ಸಮಾವೇಶಕ್ಕೆ ಬರುವ ಜನರಿಗೆ ಹಣ ಮತ್ತು ಬೆಳ್ಳಿ ನಾಣ್ಯದ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಲಾಗಿದೆ.