ಆ್ಯಪ್ನಗರ

ಶಿರಾ ಬೈಎಲೆಕ್ಷನ್: ಕೆ.ಎನ್ ರಾಜಣ್ಣ ಬಂಡಾಯ ಶಮನದ ಹೊಣೆ ಸಿದ್ದರಾಮಯ್ಯ ಹೆಗಲಿಗೆ!

ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಫೈನಲ್ ಆದರೂ ಪಕ್ಷಕ್ಕೆ ಬಂಡಾಯ ಬಿಸಿ ಆತಂಕ ಕಾಡಲು ಶುರುವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎನ್ ರಾಜಣ್ಣ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.

Vijaya Karnataka Web 16 Sep 2020, 3:38 pm
ಬೆಂಗಳೂರು: ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ ಜಯಚಂದ್ರ ಹೆಸರು ಘೋಷಣೆಯಾಗಿದೆ. ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಶಿರಾ ಕ್ಷೇತ್ರದ ಮೇಲೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಕಣ್ಣಿಟ್ಟಿದ್ದರು. ಟಿಕೆಟ್‌ ಪಡೆದುಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ಟಿಕೆಟ್‌ ಕೈತಪ್ಪಿರುವ ಪರಿಣಾಮ ರಾಜಣ್ಣ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Vijaya Karnataka Web kn rajanna


ಈ ನಿಟ್ಟಿನಲ್ಲಿ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್‌ಗೆ ತಟ್ಟುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜಣ್ಣ ಬಂಡಾಯ ಶಮನ ಮಾಡುವ ಹೊಣೆಗಾರಿಕೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ.

ಶಿರಾ ಬೈಎಲೆಕ್ಷನ್‌ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್; ಕೈ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಕಣಕ್ಕೆ..!

ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಅವರ ಜೊತೆಗೆ ರಾಜಣ್ಣ ಆಗಮಿಸಿದರು. ಈ ಸಂದರ್ಭದಲ್ಲಿ ಉಪಚುನಾವಣೆಯಲ್ಲಿ ಯಾವುದೇ ಬಂಡಾಯ ಏಳದಂತೆ ರಾಜಣ್ಣ ಅವರ ಮನವೋಲಿಕೆಯನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡದೇ ಇದ್ದಿದ್ದಕ್ಕೆ ರಾಜಣ್ಣ ಬಂಡಾಯ ಎದ್ದಿದ್ದರು. ಈ ಬಂಡಾಯ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೋಲಿಗೆ ಒಂದು ಕಾರಣ ಎನ್ನಲಾಗುತ್ತಿದೆ.

ಸದನದಲ್ಲಿ ಸದ್ದು ಮಾಡಲು ಕೈ ಪಾಳಯ ಸಜ್ಜು! ಸಿಎಲ್‌ಪಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಈ ನಿಟ್ಟಿನಲ್ಲಿ ಉಪಚುನಾವಣೆಯಲ್ಲಿ ರಾಜಣ್ಣ ಬಂಡಾಯವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಪಪೋಟಿ ಇರುವುದರಿಂದ ಆಂತರಿಕವಾಗಿ ಬಂಡಾಯ ಏಳದಂತೆ ಎಚ್ಚರಿಕೆ ವಹಿಸಲು ಮುಂದಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಲಿದೆ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ