ಆ್ಯಪ್ನಗರ

ಶಿರಾ ಉಪಚುನಾವಣೆಗೆ ಜೆಡಿಎಸ್‌‌‌ ಅಭ್ಯರ್ಥಿ ಘೋಷಿಸಿದ ಎಚ್‌ಡಿಡಿ

ನಗರದ ಜೆಡಿಎಸ್‌ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ ಮಾಜಿ ಪ್ರಧಾನಿ ದೇವೇಗೌಡರು ಮಾಜಿ ಶಾಸಕ, ದಿವಂಗತ ಸತ್ಯನಾರಾಯಣ ಅವರ ಪತ್ನಿಗೇ ಟಿಕೆಟ್‌ ನೀಡುವುದಾಗಿ ಹೇಳಿದ್ದಾರೆ.

Vijaya Karnataka 6 Oct 2020, 7:25 pm
ಬೆಂಗಳೂರು: ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜಾತ್ಯಾತೀತ ಜನತಾ ದಳ ತನ್ನ ಅಭ್ಯರ್ಥಿ ಘೋಷಿಸಿದೆ.
Vijaya Karnataka Web HD Deve Gowda


ನಗರದ ಜೆಡಿಎಸ್‌ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಅಭ್ಯರ್ಥಿ ಘೋಷಿಸಿದ್ದು, ಮಾಜಿ ಶಾಸಕ, ದಿವಂಗತ ಸತ್ಯನಾರಾಯಣ ಅವರ ಪತ್ನಿಗೇ ಟಿಕೆಟ್‌ ನೀಡುವುದಾಗಿ ಹೇಳಿದ್ದಾರೆ.

ದಿವಂಗತ ಸತ್ಯನಾರಾಯಣ ಅವರ ಪತ್ನಿಯೇಶಿರಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿ, ಗೊಂದಲಗಳಿಗೆ ತೆರೆ ಎಳೆದ ಗೌಡರು ಅಭ್ಯರ್ಥಿ. ಇದರಲ್ಲಿ ಯಾವುದೇ ಎರಡು ಮಾತಿಲ್ಲ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮನೇ ನಮ್ಮ ಅಭ್ಯರ್ಥಿ ಎಂದು ಎಚ್‌ಡಿ ದೇವೇಗೌಡರು ಹೇಳಿದ್ದಾರೆ.

ಶಿರಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಯಾರು ಎನ್ನುವುದು ಬಹಳ ಕುತೂಹಲ ಮೂಡಿಸಿತ್ತು. ಪಕ್ಷದ ಸ್ಥಳೀಯ ನಾಯಕರಾದ ಆರ್.‌ ಉಗ್ರೇಶ್‌ ಮತ್ತು ಸಿ.ಆರ್. ಉಮೇಶ್‌ ಕೂಡ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಆದರೆ ಅಭ್ಯರ್ಥಿ ಘೋಷಣೆ ಮೂಲಕ ಎಲ್ಲಾ ಗೊಂದಲಗಳಿಗೆ ದೇವೇಗೌಡರು ತೆರೆ ಎಳೆದಿದ್ದಾರೆ.

ಶಿರಾ ಬೈಎಲೆಕ್ಷನ್‌ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್; ಕೈ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಕಣಕ್ಕೆ..!
ಈಗಾಗಲೇ ಕಾಂಗ್ರೆಸ್‌ ಮಾಜಿ ಸಚಿವ ಟಿ.ಬಿ. ಜಯಚಂದ್ರರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ಅಭ್ಯರ್ಥಿ ಹೆಸರನ್ನು ಘೋಷಿಸಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ