ಆ್ಯಪ್ನಗರ

ಹಿಂದಿ ದಿವಸ್‌ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಅಭಿಯಾನ

ಹಿಂದಿ ದಿವಸ್‌ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಅಭಿಯಾನ ಹಮ್ಮಿಕೊಂಡಿದ್ದಾರೆ. ಹಿಂದಿ ಹೇರಿಕೆಯನ್ನು ಕನ್ನಡಿಗರು ಖಂಡಿಸಿದ್ದು ಮುಂದಿನ ದಿನಗಳಲ್ಲಿ ತೀವ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

Vijaya Karnataka Web 14 Sep 2020, 10:21 am
ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಹಮ್ಮಿಕೊಂಡಿದ್ದಾರೆ. ಕನ್ನಡ ದಿವಸವನ್ನು ಆಚರಣೆ ಮಾಡುವ ವರೆಗೂ ಹಿಂದಿ ದಿವಸ್ ಆಚರಣೆ ಮಾಡುವುದನ್ನು ನಿಲ್ಲಿಸಲಿ ಎಂದು ಆಗ್ರಹಿಸಿದ್ದಾರೆ.
Vijaya Karnataka Web kannada


ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್‌ ಹಾಗೂ ಫೇಸ್ ಬುಕ್‌ನಲ್ಲಿ ಕನ್ನಡ ಪರ ಸಂಘಟನೆಗಳು, ಸಾಹಿತಿಗಳು, ಬರಹಗಾರರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ #StopHindiImposition#ServeInMyLanguage ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿಕೊಂಡು ಹಲವರು ಪೋಸ್ಟ್‌ ಮಾಡಿದ್ದಾರೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೂಡಾ ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ದೇಶದ ಇತರೆ ಭಾಷಿಕರು ದಂಗೆ ಏಳುವ ಮುನ್ನ ಹಿಂದಿ ಏರಿಕೆ ನಿಲ್ಲಿಸಿ; ಕೇಂದ್ರಕ್ಕೆ ಎಚ್‌ಡಿಕೆ ಎಚ್ಚರಿಕೆ..!


“ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿ ಹೇರಿಕೆಗೆ ವಿರೋಧ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಸದ್ದು!


ಸೆಪ್ಟಂಬರ್‌ 14 ರಂದು ಹಿಂದಿ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಇದು ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆ ಮಾಡುವ ಹುನ್ನಾರ ಎಂದು ಕನ್ನಡಿಗರು ಆರೋಪಿಸುತ್ತಿದ್ದಾರೆ. ಈಗಾಗಲೇ ಟೀ ಶರ್ಟ್ ಅಭಿಯಾನವೂ ನಡೆಯುತ್ತಿದ್ದು ಇದಕ್ಕೆ ಸಿನಿಮಾ ನಟ-ನಟಿಯರು ಬೆಂಬಲ ಸೂಚಿಸಿದ್ದಾರೆ. ನಟ ಚೇತನ್‌, ಪ್ರಕಾಶ್ ರಾಜ್ ಕೂಡಾ ಹಿಂದಿ ಹೇರಿಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡಾ ಟ್ವೀಟ್ ಮಾಡಿದ್ದು “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ' ಎನ್ನುವ ಮಾತಿಗೆ ಸಂಪೂರ್ಣ ಸಹಮತವಿದೆ. ಕೇಂದ್ರ ತ್ರಿಭಾಷಾ ಸೂತ್ರದ‌ ಮೂಲಕ ಕನ್ನಡಿಗರ ಮೇಲೆ ಬಲವಂತದ ಹಿಂದಿ ಏರಿಕೆ ಮಾಡುತ್ತಿರುವುದು ಖಂಡನೀಯ. ದೆಹಲಿ ಹುಕುಂ ಪಾಲಿಸಲು ಶಿರ ಬಾಗಿಸಿ ನಿಂತಿರುವ ರಾಜ್ಯ ಸರ್ಕಾರ, ತ್ರಿಭಾಷಾ ಸೂತ್ರದ ಬಗ್ಗೆ ಸೊಲ್ಲೆತ್ತದೆ ಇರುವುದು ರಾಜ್ಯಕ್ಕೆ ಮಾಡುತ್ತಿರುವ ದ್ರೋಹ” ಎಂದಿದ್ದಾರೆ.



ಇಲ್ಲದೆ ಹಿಂದಿ ದಿವಸ್ ವಿರೋಧಿಸಿ ಸೋಮವಾರ ಕನ್ನಡ ಪರ ಸಂಘಟನೆಗಳು ಪ್ರತಿಭಟನಾ ಮೆರವಣಿಗೆಯನ್ನು ಕೂಡಾ ಹಮ್ಮಿಕೊಂಡಿವೆ. ಈ ಮೂಲಕ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲು ಮುಂದಾಗಿದ್ದಾರೆ ಕನ್ನಡಿಗರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ