ಆ್ಯಪ್ನಗರ

ಲೋಕಸಭೆ ಚುನಾವಣೆ: ಜಾಲತಾಣಗಳ ನಿಯಂತ್ರಣ ಸಾಧ್ಯವೆ?

ಚುನಾವಣಾ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿ ಜಾಹೀರಾತು ನೀಡುವಾಗ ಮಾತ್ರ ಆಯೋಗದ ಪೂರ್ವಾನುಮತಿ ಪಡೆದುಕೊಳ್ಳಬೇಕು. ಇದು ಟಿವಿ ಜಾಹೀರಾತಿಗೂ ಅನ್ವಯವಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

Vijaya Karnataka 11 Mar 2019, 7:53 am
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಪ್ರಚಾರ, ಚರ್ಚೆ ಇತ್ಯಾದಿ ವಿಚಾರಗಳ ಬಗ್ಗೆ ಚುನಾವಣಾ ಆಯೋಗ ಯಾವುದೇ ಸ್ಪಷ್ಟ ನಿರ್ದೇಶನವನ್ನು ನೀಡಿಲ್ಲ. ಚುನಾವಣಾ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿ ಜಾಹೀರಾತು ನೀಡುವಾಗ ಮಾತ್ರ ಆಯೋಗದ ಪೂರ್ವಾನುಮತಿ ಪಡೆದುಕೊಳ್ಳಬೇಕು. ಇದು ಟಿವಿ ಜಾಹೀರಾತಿಗೂ ಅನ್ವಯವಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.
Vijaya Karnataka Web EC


ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳು ನಡೆಸುವ ಚರ್ಚೆ ಬಗ್ಗೆ ಆಯೋಗ ಯಾವುದೇ ಸ್ಪಷ್ಟನೆ ನೀಡಿಲ್ಲ. ಪೇಯ್ಡ್‌ ನ್ಯೂಸ್‌ ನಿಯಂತ್ರಣಕ್ಕೆ ಒಂದಿಷ್ಟು ಮಾರ್ಗದರ್ಶಿ ಸೂತ್ರ ನೀಡಿದೆ. ಇದೇ ಕಾಲಕ್ಕೆ ಸುಳ್ಳು ಸುದ್ದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇವುಗಳ ನಿಯಂತ್ರಣಕ್ಕೆ ಎಲ್ಲರ ಸಹಕಾರ ಬಯಸಿದೆ.

ಚುನಾವಣಾ ಸಂಬಂಧಿ ಅಕ್ರಮಗಳು, ಸುಳ್ಳು ಸುದ್ದಿ ಬಿತ್ತರವಾಗುತ್ತಿರುವುದು ಸೇರಿದಂತೆ ಇತರೆ ವಿಚಾರಗಳ ಮೇಲೆ ನಿಗಾ ಇಡುವುದಕ್ಕೆ ಸಿ-ವಿಜಿಲ್‌ ಎಂಬ ಆ್ಯಪ್‌ ಆರಂಭಿಸಲಾಗಿದೆ. ಇದರಲ್ಲಿ ಮಾಹಿತಿ ನೀಡಬಹುದಾಗಿದೆ. ಈ ಮಾಹಿತಿ ಸಮೀಪದಲ್ಲಿರುವ ಚುನಾವಣಾ ವಿಚಕ್ಷಣಾ ದಳಕ್ಕೆ ರವಾನೆಯಾಗುತ್ತದೆ. 100 ನಿಮಿಷಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದವರು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ