ಆ್ಯಪ್ನಗರ

ಘನತ್ಯಾಜ್ಯ ವಿಲೇವಾರಿಗೆ ಗ್ರಾ.ಪಂಗೆ 20 ಲಕ್ಷ ರೂ., ಕಸ ವಿಲೇವಾರಿಗೆ ಸ್ಥಳ ನಿಗದಿ: ಈಶ್ವರಪ್ಪ

ಎಲ್ಲೆಡೆ ಈಗ ಘನತ್ಯಾಜ್ಯ ವಿಲೇವಾರಿ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೆಎಸ್‌ ಈಶ್ವರಪ್ಪ ತಿಳಿಸಿದ್ದಾರೆ.

Vijaya Karnataka Web 6 Dec 2019, 8:52 pm
ಬೆಂಗಳೂರು: ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯ್ತಿಗೂ 20 ಲಕ್ಷ ರೂಪಾಯಿಗಳಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
Vijaya Karnataka Web ಕೆಎಸ್‌ ಈಶ್ವರಪ್ಪ
ಕೆಎಸ್‌ ಈಶ್ವರಪ್ಪ


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ಕೆಎಸ್‌ ಈಶ್ವರಪ್ಪ ಮಾತನಾಡಿದರು.

ಕಸ ವಿಲೇವಾರಿಗೆ ಈಗಾಗಲೇ ಸ್ಥಳ ನಿಗದಿ ಮಾಡಲಾಗಿದೆ. ಈ ಯೋಜನೆಯ ಉಸ್ತುವಾರಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ, ನಿರೀಕ್ಷೆಯಂತೆ ಎಲ್ಲ ಕೆಲಸ ಕಾರ್ಯಗಳು ಅನುಷ್ಠಾನಗೊಂಡಲ್ಲಿ ಒಂದೆರೆಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದರು.

ಐದು ಸಾವಿರಕ್ಕೂ ಹೆಚ್ಚು ಗ್ರಾಮಪಂಚಾಯಿತಿಗಳು ಅಸ್ತಿತ್ವದಲ್ಲಿದ್ದು, ಎಲ್ಲ ಪಂಚಾಯಿತಿಗಳಿಗೂ ತಲಾ 20 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ