ಆ್ಯಪ್ನಗರ

ಆಸ್ಪತ್ರೆಗಳಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ ನೀರಿನ ಸಮಸ್ಯೆಯನ್ನು ಪ್ರಥಮ ಆಧ್ಯತೆಯಾಗಿ ಪರಿಗಣಿಸಿ, ತಮ್ಮ ಹಂತದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

Vijaya Karnataka 20 May 2019, 5:00 am
ಬೆಂಗಳೂರು : ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ ನೀರಿನ ಸಮಸ್ಯೆಯನ್ನು ಪ್ರಥಮ ಆಧ್ಯತೆಯಾಗಿ ಪರಿಗಣಿಸಿ, ತಮ್ಮ ಹಂತದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.
Vijaya Karnataka Web solve the water problem in hospitals circular
ಆಸ್ಪತ್ರೆಗಳಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ


ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ವರದಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೋಗಿಗಳಿಗೆ ತೊಂದರೆ ಉಂಟಾಗದಂತೆ ಆಸ್ಪತ್ರೆ ಮಟ್ಟದಲ್ಲಿಯೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ಸಂಬಂಧ ಆಸ್ಪತ್ರೆಗಳಲ್ಲಿ ಕೊಳವೆಬಾವಿಗಳು ದುರಸ್ಥಿ ಇದ್ದಲ್ಲಿ, ಆಸ್ಪತ್ರೆಗಳ ಅನುದಾನ ಬಳಸಿ ಕೊಳವೆಬಾವಿಗಳ ಪುನರುಜ್ಜೀವನಗೊಳಿಸಿ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ಕೊಳವೆಬಾವಿಗಳ ಪುನರುಜ್ಜೀವನ ಸಾಧ್ಯವಾಗದಿದ್ದರೆ ಹೊಸದಾಗಿ ಕೊಳವೆಬಾವಿ ತೋಡಿಸಿ, ಇವೆರಡೂ ಸಾಧ್ಯವಾಗದಿದ್ದರೆ ಟ್ಯಾಂಕರ್‌ಗಳ ಮೂಲಕ ಅಥವಾ ಶುದ್ಧೀಕರಿಸಿದ ನೀರಿನ ಕ್ಯಾನ್‌ಗಳ ಮೂಲಕ ನೀರು ಸರಬರಾಜು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ