ಆ್ಯಪ್ನಗರ

Bharat Jodo Yatra | ಭಾರತ್ ಜೋಡೋದಲ್ಲಿ ಹೆಜ್ಜೆ ಹಾಕಿದ ಸೋನಿಯಾ: ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಹುರುಪು

ಮಂಡ್ಯ ಜಿಲ್ಲೆಯ ಬೆಳ್ಳಾಳೆಯಲ್ಲಿ ಪಾದಯಾತ್ರೆ ಆರಂಭಗೊಂಡಿದ್ದು, ಸೋನಿಯಾ ಗಾಂಧಿ ಹೆಜ್ಜೆ ಹಾಕುತ್ತಿದ್ದಾರೆ. ಆರೋಗ್ಯದ ಸಮಸ್ಯೆಯ ಕಾರಣದಿಂದಾಗಿ ಅವರು ಹೆಚ್ಚು ಸಮಯ ಪಾದಯಾತ್ರೆಯಲ್ಲಿ ನಡೆಯುತ್ತಿಲ್ಲ. ಆದರೆ ಸೋನಿಯಾ ಭಾಗಿ ರಾಜ್ಯ ಕಾಂಗ್ರೆಸ್‌ ಮುಖಂಡರಿಗೂ ಮತ್ತಷ್ಟು ಹುರುಪು ತಂದುಕೊಟ್ಟಂತಿದೆ. ರಾಹುಲ್ ಗಾಂಧಿ ಜೊತೆಗೆ ಶುಕ್ರವಾರ ಪ್ರಿಯಾಂಕಾ ಗಾಂಧಿ ಕೂಡಾ ಹೆಜ್ಜೆ ಹಾಕಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಡೀ ಗಾಂಧಿ ಕುಟುಂಬ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದೆ. ಚುನಾವಣಾ ವರ್ಷ ಆಗಿರುವುದರಿಂದ ಗಾಂಧಿ ಕುಟುಂಬದ ಭಾಗಿದಾರಿಕೆ ರಾಜ್ಯ ಕಾಂಗ್ರೆಸ್‌ ಪಾಲಿಗೂ ರಾಜಕೀಯ ಲಾಭ ತಂದುಕೊಡುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 6 Oct 2022, 10:33 am
ಮಂಡ್ಯ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕಿರುವುದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಮತ್ತಷ್ಟು ಹುರುಪು ತುಂಬಿದೆ. ನಾಲ್ಕು ದಿನಗಳ ಪಾದಯಾತ್ರೆ ಪೂರ್ಣಗೊಂಡಿದ್ದು, ಎರಡು ದಿನಗಳ ವಿಶ್ರಾಂತಿಯ ಬಳಿಕ ಗುರುವಾರ ಮತ್ತೊಮ್ಮೆ ಆರಂಭಗೊಂಡಿದೆ.
Vijaya Karnataka Web ಕಾಂಗ್ರೆಸ್ ಐಕ್ಯತಾ ಯಾತ್ರೆ


ಮಂಡ್ಯ ಜಿಲ್ಲೆಯ ಬೆಳ್ಳಾಳೆಯಲ್ಲಿ ಪಾದಯಾತ್ರೆ ಆರಂಭಗೊಂಡಿದ್ದು, ಸೋನಿಯಾ ಗಾಂಧಿ ಹೆಜ್ಜೆ ಹಾಕುತ್ತಿದ್ದಾರೆ. ಆರೋಗ್ಯದ ಸಮಸ್ಯೆಯ ಕಾರಣದಿಂದಾಗಿ ಅವರು ಹೆಚ್ಚು ಸಮಯ ಪಾದಯಾತ್ರೆಯಲ್ಲಿ ನಡೆಯುತ್ತಿಲ್ಲ. ಆದರೆ ಸೋನಿಯಾ ಭಾಗಿ ರಾಜ್ಯ ಕಾಂಗ್ರೆಸ್‌ ಮುಖಂಡರಿಗೂ ಮತ್ತಷ್ಟು ಹುರುಪು ತಂದುಕೊಟ್ಟಂತಿದೆ.

Bharat Jodo Yatra : ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಠದಂತ ಒಂದು ವ್ಯರ್ಥ ಹಾರಾಟ: ಡಾ. ಕೆ ಸುಧಾಕರ್‌
ರಾಹುಲ್ ಗಾಂಧಿ ಜೊತೆಗೆ ಶುಕ್ರವಾರ ಪ್ರಿಯಾಂಕಾ ಗಾಂಧಿ ಕೂಡಾ ಹೆಜ್ಜೆ ಹಾಕಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಡೀ ಗಾಂಧಿ ಕುಟುಂಬ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದೆ. ಚುನಾವಣಾ ವರ್ಷ ಆಗಿರುವುದರಿಂದ ಗಾಂಧಿ ಕುಟುಂಬದ ಭಾಗಿದಾರಿಕೆ ರಾಜ್ಯ ಕಾಂಗ್ರೆಸ್‌ ಪಾಲಿಗೂ ರಾಜಕೀಯ ಲಾಭ ತಂದುಕೊಡುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ.

ಕನ್ಯಾಕುಮಾರಿಯಿಂದ ಆರಂಭಗೊಂಡ ಈ ಯಾತ್ರೆಯಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಕೇವಲ ರಾಹುಲ್ ಗಾಂಧಿ ಮಾತ್ರ ಹೆಜ್ಜೆ ಹಾಕಿದ್ದರು. ಆದರೆ. ಕರ್ನಾಟಕದಲ್ಲಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭಾಗಿಯಾಗುವಂತೆ ರಾಜ್ಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇದಕ್ಕಾಗಿ ಅವರು ಸೋಮವಾರವೇ ರಾಜ್ಯಕ್ಕೆ ಆಗಮಿಸಿದ್ದರು.

Bharat Jodo Yatra : ಭಾರತ್ ಜೋಡೋ ಯಾತ್ರೆ, ಕರ್ನಾಟಕದಲ್ಲಿ ಗಾಂಧಿ ಕುಟುಂಬದ ಹೆಜ್ಜೆಯ ರಾಜಕೀಯ ಪರಿಣಾಮಗಳೇನು?
ಸೋನಿಯಾ ಗಾಂಧಿ ಮೇಲುಕೋಟೆಯಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರೆ, ಪ್ರಿಯಾಂಕಾ ಗಾಂಧಿ ಶುಕ್ರವಾರ ನಾಗಮಂಗಲದಿಂದ ಹೆಜ್ಜೆ ಹಾಕಲಿದ್ದಾರೆ. ಜೊತೆಗೆ ಆದಿ ಚುಂಚನಗಿರಿ ಮಠಕ್ಕೂ ಪ್ರಿಯಾಂಕಾ ಗಾಂಧಿ ಶುಕ್ರವಾರ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಐದನೇ ದಿನದ ನಡಿಗೆಯಲ್ಲಿ ರಾಹುಲ್ ಗಾಂಧಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಪಕ್ಷದ ಕೆಲವು ಮುಖಂಡರ ನಡೆಯಿಂದ ಅಸಮಾಧಾನಗೊಂಡಿದ್ದ ಕೆ.ಎಚ್‌ ಮುನಿಯಪ್ಪ ಅವರು ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದರು. ಮುನಿಯಪ್ಪ ಅವರನ್ನು ಹತ್ತಿರಕ್ಕೆ ಕರೆದು ಮಾತನಾಡಿದ ರಾಹುಲ್ ಗಾಂಧಿ, ಅವರ ಹೆಗಲಿಗೆ ಕೈಹಾಕಿ ಕೆಲಕಾಲ ಹೆಜ್ಜೆ ಹಾಕಿದರು. ಈ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರಲ್ಲಿರುವ ಅಸಮಾಧಾನ ಶಮನಕ್ಕೂ ರಾಹುಲ್ ಪ್ರಯತ್ನ ನಡೆಸುತ್ತಿರುವುದು ಗೋಚರಿಸುತ್ತಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿನ ನಡೆಯಲಿದೆ. ಒಟ್ಟು ಮೂರು ಹಂತದಲ್ಲಿ ಪಾದಯಾತ್ರೆ ಸಾಗಲಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಬಿರುಸಿನಿಂದ ‌ಹೆಜ್ಜೆ ಹಾಕುತ್ತಿದ್ದಾರೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ