ಆ್ಯಪ್ನಗರ

ನೆರೆ ಪರಿಹಾರಕ್ಕಾಗಿ ಪ್ರಧಾನಿ ಬಳಿಗೆ ಶೀಘ್ರ ನಿಯೋಗ: ಯಡಿಯೂರಪ್ಪ

ಕರ್ನಾಟಕದಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹಲವೆಡೆ ಈಗ ಪರಿಸ್ಥಿತಿ ತಿಳಿಗೊಂಡಿದ್ದರೂ ಸಂತ್ರಸ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Vijaya Karnataka Web 7 Sep 2019, 4:59 pm
ಮೈಸೂರು: ನೆರೆ ಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿಗೆ ನಿಯೋಗ ತೆರಳುವ ಬಗ್ಗೆ ಪರಾಮರ್ಶೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ ಬಾಗಿನ ಅರ್ಪಣೆ
ಯಡಿಯೂರಪ್ಪ ಬಾಗಿನ ಅರ್ಪಣೆ


ನೆರೆ ಪರಿಹಾರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ನೆರೆ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಸಹ ಈಗಾಗಲೆ ರಾಜ್ಯಕ್ಕೆ ಬಂದು ಪರಿಶೀಲನೆ ಮಾಡಿ ಹೋಗಿದ್ದಾರೆ. ಹಾಗಾಗಿ ಅವರಿಗೆ ರಾಜ್ಯದಲ್ಲಿನ ವಾಸ್ತವ ಪರಿಸ್ಥಿತಿ ತಿಳಿದಿದೆ ಎಂದರು.

ಸದ್ಯದಲ್ಲಿಯೆ ಅವರಿಂದ ಪರಿಹಾರ ನಿರೀಕ್ಷೆ ಮಾಡುತ್ತಿದ್ದೇವೆ. ಒಂದು ವೇಳೆ ಪರಿಹಾರ ಹಣ ನೀಡುವುದು ತಡವಾದಲ್ಲಿ ಮತ್ತೆ ಪ್ರಧಾನಿ ಬಳಿಗೆ ನಿಯೋಗ ತೆರಳುವ ಬಗ್ಗೆ ಪರಾಮರ್ಶೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ಕೆಆರ್‌ಎಸ್, ಕಬಿನಿ ಜಲಾಶಯಗಳು ತುಂಬಿ ತುಳುಕುತ್ತಿರುವುದರಿಂದ ತಮಿಳುನಾಡಿಗೆ ನೀರು ಹರಿಸಬೇಕಾದ ಸಮಸ್ಯೆ ಬಗೆಹರಿದಿದೆ. ಆದರೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಅನೇಕ ಸಂಕಷ್ಟಗಳು ಎದುರಾಗಿವೆ. ಒಂದು ಲಕ್ಷ ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಅವುಗಳನ್ನು ಪುನರ್ ನಿರ್ಮಿಸಬೇಕಿದೆ ಎಂದು ಸಿಎಂ ತಿಳಿಸಿದರು.

ರಾಜ್ಯ ಸರಕಾರವೂ ಬೇರೆ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಪಕ್ಕಕ್ಕಿಟ್ಟು , ನೆರೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ, ಆ ಕೆಲಸಗಳಲ್ಲಿ ನಿರತವಾಗಿದೆ ಎಂದರು.
130 ಟಿಎಂಸಿ ನೀರು ತಮಿಳುನಾಡಿಗೆ ಹೋಗಿದೆ. ಅವರಿಗೆ ಸಾಕಷ್ಟು ನೀರು ದೊರೆತಿದೆ. ಈ ಸಂದರ್ಭದಲ್ಲಿ ಮೇಕೆ ದಾಟು ಯೋಜನೆ ಅನುಷ್ಠಾನದ ಬಗ್ಗೆ ಪರಾಮರ್ಶೆ ಮಾಡುತ್ತೇನೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ