ಆ್ಯಪ್ನಗರ

ರೈತರ ಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: HDK ಟ್ವೀಟ್

ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ

Vijaya Karnataka Web 15 Jun 2018, 2:33 pm
ಬೆಂಗಳೂರು: 'ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
Vijaya Karnataka Web HDK


ರಾಜ್ಯದಲ್ಲಿ ಜಾತ್ಯತೀತ ಜನತಾದಳ ಅಸ್ತಿತ್ವಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಚುನಾವಣೆಗೂ ಮುನ್ನ ಎಚ್‌ಡಿಕೆ ಭರವಸೆ ನೀಡಿದ್ದರು. ಆದರೆ, ಸಮ್ಮಿಶ್ರ ಸರಕಾರ ರಚನೆಯಾದ ಹಿನ್ನೆಲೆಯಲ್ಲಿ ಸಾಲ ಮನ್ನಾ ವಿಚಾರವನ್ನು ಮುಂದೂಡುತ್ತಲೇ ಬಂದಿದ್ದರು. ಈಗ ಅಧಿಕೃತ ಟ್ವೀಟ್ ಮಾಡುವ ಮೂಲಕ ರಾಜ್ಯದ ರೈತರಲ್ಲಿ ಭರವಸೆ ಮೂಡಿಸಿದ್ದಾರೆ.



ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಿಎ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, 'ಸಾಲ ಮನ್ನಾ ಮಾಡುವುದು ಹೇಗೆ ಎನ್ನುವುದು ಗೊತ್ತಿದೆ. ನಾನೇನೂ ವಚನ ಭ್ರಷ್ಟನಲ್ಲ ಎಂದಿದ್ದಾರೆ.

ಮಾಧ್ಯಮದವರು ಎಷ್ಟು ದಿನ ಅದೇ ರಾಜಕೀಯ ಸುದ್ದಿ ತೋರಿಸುತ್ತೀರ? ಎಂದು ಹರಿಹಾಯ್ದ ಅವರು, 'ಈ ಬಾರಿ ಜುಲೈ ಮೊದಲ ವಾರದಲ್ಲೇ ಬಜೆಟ್ ಮಂಡಿಸಬೇಕೆಂದಿದ್ದೇನೆ. ಅದರಲ್ಲೇ ಸಾಲಮನ್ನಾ ಅಳವಡಿಸುವ ಸಂಬಂಧ ಚರ್ಚಿಸಿದ್ದೇನೆ. ಈ ಬಗ್ಗೆ ಬ್ಯಾಂಕ್‌ನವರ ಜತೆ ಚರ್ಚಿಸಿ ಯಾವ ರಾಷ್ಟ್ರೀಯ ಬ್ಯಾಂಕ್‌ನಲ್ಲಿ ಎಷ್ಟು ಸಾಲ ಇದೆ ಎಂದು ವಿಚಾರಿಸುತ್ತೇನೆ' ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ