ಆ್ಯಪ್ನಗರ

ದಕ್ಷಿಣ ಒಳನಾಡಿಗೆ ಆವರಿಸಿದ ಮಾನ್ಸೂನ್: ಇನ್ನೆರಡು ದಿನದಲ್ಲಿ ರಾಜ್ಯವ್ಯಾಪಿ ಮುಂಗಾರು!

ಕರಾವಳಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ನೈಋುತ್ಯ ಮುಂಗಾರು ಸುರಿಯುತ್ತಿದ್ದು, ಈಗ ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೂ ವಿಸ್ತರಿಸಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಿಸುವ ನಿರೀಕ್ಷೆ ಇದೆ.

Vijaya Karnataka Web 9 Jun 2020, 5:22 pm
ಬೆಂಗಳೂರು: ಕರಾವಳಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ನೈಋುತ್ಯ ಮುಂಗಾರು ಸುರಿಯುತ್ತಿದ್ದು, ಈಗ ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೂ ವಿಸ್ತರಿಸಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಿಸುವ ನಿರೀಕ್ಷೆ ಇದೆ.
Vijaya Karnataka Web monsoon forecast PTI


ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಸ್ವಲ್ಪ ಪ್ರಮಾಣದ ಮಳೆ ಸುರಿದಿದೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಬೆಂಗಳೂರು ಭಾಗಗಳಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಇನ್ನೂ ವ್ಯಾಪಕ ಮಳೆ ಆರಂಭವಾಗಿಲ್ಲ.

ಜೂ.13ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತೆಲಂಗಾಣ, ತಮಿಳುನಾಡಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು: ರಾಜ್ಯದಲ್ಲೂ ರದ್ದಾಗುತ್ತಾ ಎಗ್ಸಾಂ?

ನೈರುತ್ಯ ಮಾನ್ಸೂನ್‌ ಮಾರುತಗಳು ಈಗಾಗಲೇ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಪ್ರವೇಶಿಸಿದೆ. ಎರಡರಿಂದ ಮೂರು ದಿನಗಳಲ್ಲಿ ರಾಯಲ ಸೀಮಾ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ನೈರುತ್ಯ ಬಂಗಾಳ ಕೊಲ್ಲಿಯನ್ನು ಪೂರ್ಣವಾಗಿ ಆವರಿಸಲಿದೆ. ಬಂಗಾಳ ಕೊಲ್ಲಿಯಲ್ಲಿ ಜೂನ್‌ 9ರಿಂದ ಮುಂದಿನ 48 ಗಂಟೆಗಳ ಕಾಲ ಕಡಿಮೆ ಒತ್ತಡ ಏರ್ಪಡಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ