ಆ್ಯಪ್ನಗರ

ಶಿವರಾಜ್‌ಕುಮಾರ್‌ ದಂಪತಿಯಿಂದ ದೇವೇಗೌಡ ಭೇಟಿ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ನಟ ಶಿವರಾಜ್‌ ಕುಮಾರ್‌ ದಂಪತಿಯು ಮಧು ಬಂಗಾರಪ್ಪ ಅವರೊಟ್ಟಿಗೆ ಮಂಗಳವಾರ ಭೇಟಿ ಮಾಡಿದರು.

Vijaya Karnataka 6 Feb 2019, 5:00 am
ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ನಟ ಶಿವರಾಜ್‌ ಕುಮಾರ್‌ ದಂಪತಿಯು ಮಧು ಬಂಗಾರಪ್ಪ ಅವರೊಟ್ಟಿಗೆ ಮಂಗಳವಾರ ಭೇಟಿ ಮಾಡಿದರು.
Vijaya Karnataka Web shivaraj


ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರ ಕಾಲು ನೋವಿನ ಕುರಿತು ಆರೋಗ್ಯ ವಿಚಾರಿಸಿದರು.

ಈ ಮಧ್ಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಧು ಬಂಗಾರಪ್ಪ ಮತ್ತೆ ಸ್ಪರ್ಧೆ ಮಾಡಲಿರುವ ಕುರಿತಂತೆ ಚರ್ಚೆ ನಡೆಯಿತು. ಕಳೆದ ಉಪಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದು, ಈ ಬಾರಿ ಗೆಲುವಿಗೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ದೇವೇಗೌಡರು ಸಲಹೆ ಮಾಡಿದರು ಎನ್ನಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ಕುಮಾರ್‌ ''ದೇವೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೆ. ಆರೋಗ್ಯವಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ನನಗೂ ಬೆನ್ನು ನೋವಿದ್ದು, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ,'' ಎಂದರು. ಶಿವರಾಜ್‌ಕುಮಾರ್‌ ದಂಪತಿ ಭೇಟಿ ಬಳಿಕ ದೇವೇಗೌಡರು ಸಂಸತ್‌ ಅಧಿವೇಶನದಲ್ಲಿ ಭಾಗವಹಿಸಲು ದಿಲ್ಲಿಗೆ ತೆರಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ