ಆ್ಯಪ್ನಗರ

ಸರಕಾರಿ ನೌಕರರ ಸಂಘದ ಅಧ್ಯಕ್ಷ ಚುನಾವಣೆಗೆ ಅಖಾಡ ರೆಡಿ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರತಿಷ್ಠಿತ ಚುನಾವಣೆಗೆ ಅಖಾಡ ಸಜ್ಜುಗೊಂಡಿದ್ದು, ಕೇಂದ್ರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ...

Vijaya Karnataka 17 Jul 2019, 5:00 am
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರತಿಷ್ಠಿತ ಚುನಾವಣೆಗೆ ಅಖಾಡ ಸಜ್ಜುಗೊಂಡಿದ್ದು, ಕೇಂದ್ರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಚುನಾವಣೆಗೆ ಬುಧವಾರದಿಂದ (ಜು.17) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
Vijaya Karnataka Web state government employee union election
ಸರಕಾರಿ ನೌಕರರ ಸಂಘದ ಅಧ್ಯಕ್ಷ ಚುನಾವಣೆಗೆ ಅಖಾಡ ರೆಡಿ


ತಾಲೂಕು, ಜಿಲ್ಲೆ ಮತ್ತು ರಾಜ್ಯ ಪರಿಷತ್‌ ಸದಸ್ಯರ ಆಯ್ಕೆ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಸುಮಾರು 5.25 ಲಕ್ಷ ಸದಸ್ಯರನ್ನು ಹೊಂದಿದೆ. ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಕ್ಕೆ ಆಗಸ್ಟ್‌ 7 ರಂದು ಚುನಾವಣೆ ನಿಗದಿಯಾಗಿದೆ. ಜು.17 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಜು.20 ಕೊನೆಯ ದಿನವಾಗಿರುತ್ತದೆ.

ಪ್ರತಿಷ್ಠಿತ ಹುದ್ದೆಯಾಗಿರುವ ಸಂಘದ ಅಧ್ಯಕ್ಷಗಾದಿ ಗಿಟ್ಟಿಸಲು ಮೂರು ಸಿಂಡಿಕೇಟ್‌ಗಳು ಈಗಾಗಲೇ ಚುನಾವಣಾ ಅಖಾಡದಲ್ಲಿ ಭಾರಿ ಪೈಪೋಟಿಗೆ ಇಳಿದಿವೆ. ಮತದಾರರ ಓಲೈಕೆಗೆ ದುಬಾರಿ ಉಡುಗೊರೆ, ಭರ್ಜರಿ ಔತಣಕೂಟಗಳು ನಡೆಯುತ್ತಿವೆ. ನಿಕಟಪೂರ್ವ ಅಧ್ಯಕ್ಷ ಎಚ್‌.ಕೆ.ರಾಮು, ಅಬಕಾರಿ ಡಿವೈಎಸ್‌ಪಿ ಮಧುಸೂಧನರೆಡ್ಡಿ, ಕಂದಾಯ ಇಲಾಖೆಯ ಕೃಷ್ಣಮೂರ್ತಿ ಹಾಗೂ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಬಣದಿಂದ ಮಧುಸೂಧನರೆಡ್ಡಿ ಅಥವಾ ಕೃಷ್ಣಮೂರ್ತಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತಯಾರಿ ನಡೆದಿದ್ದರೆ, ನಿಕಟಪೂರ್ವ ಅಧ್ಯಕ್ಷ ಎಚ್‌.ಕೆ.ರಾಮು ಅವರನ್ನೇ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಮಾಡಲು ಮತ್ತೊಬ್ಬ ಮಾಜಿ ಅಧ್ಯಕ್ಷ ಭೈರಪ್ಪ ಬಣ ಉದ್ದೇಶಿಸಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಮತ್ತು ಬೆಳಗಾವಿ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ ಅವರ ಪೈಕಿ ಒಬ್ಬರು ಒಮ್ಮತದ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ.

ಕೇಂದ್ರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯಲಿದ್ದು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಸೇರಿ ಉಳಿದ ಪದಾಧಿಕಾರಿಗಳ ನೇಮಕ ಅಧಿಕಾರ ನೂತನ ಅಧ್ಯಕ್ಷರ ವಿವೇಚನೆಯಂತೆ ನಡೆಯಲಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ