ಆ್ಯಪ್ನಗರ

ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್‌ ಸ್ಟಾರ್‌ ಪಿ.ವಿ. ಸಿಂಧುಗೆ ಆಹ್ವಾನ

ಇತ್ತೀಚೆಗಷ್ಟೇ ನಡೆದ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ. ಸಿಂಧು ಚಿನ್ನ ಗೆದ್ದು, ಈ ಸಾಧನೆ ಮಾಡಿದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.

Vijaya Karnataka Web 10 Sep 2019, 9:28 pm
ಬೆಂಗಳೂರು: ಈ ಬಾರಿಯ ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಅವರನ್ನು ರಾಜ್ಯ ಸರಕಾರ ಆಹ್ವಾನಿಸಿದೆ.
Vijaya Karnataka Web badminton player PV Sindhu


ಈ ಕುರಿತು ಪಿ.ವಿ.ಸಿಂಧು ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅಕ್ಟೋಬರ್‌ 1 ರಂದು ನಡೆಯಲಿರುವ ಯುವ ದಸರಾ 2019ರ ಉದ್ಘಾಟನೆಗೆ ರಾಜ್ಯದ ಅತಿಥಿಯಾಗಿ ನಿಮ್ಮನ್ನು ಆಹ್ವಾನಿಸುವುದು ನಮಗೆ ಗೌರವದ ವಿಷಯ ಎಂದಿದ್ದಾರೆ.

ಇತ್ತೀಚೆಗಷ್ಟೇ ನಡೆದ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ. ಸಿಂಧು ಚಿನ್ನದ ಪದಕ ಗೆದ್ದು, ಈ ಸಾಧನೆ ಮಾಡಿದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು. ಈ ಹಿಂದೆ ಒಲಂಪಿಕ್ಸ್‌ನಲ್ಲಿಯೂ ಅವರು ಬೆಳ್ಳಿ ಗೆದ್ದಿದ್ದರು.

ಇದೀಗ ಅವರನ್ನೇ ರಾಜ್ಯ ಸರಕಾರ 410ನೇ ದಸರಾ ಆಚರಣೆಯ ಅಂಗವಾಗಿ ನಡೆಯಲಿರುವ ಯುವ ದಸರಾದ ಉದ್ಘಾಟನೆಗೆ ಆಹ್ವಾನಿಸಿದೆ. ಓರ್ವ ಕ್ರೀಡಾಪಟುವಾಗಿ ನೀವು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂಬುದಾಗಿ ಆಹ್ವಾನ ಪತ್ರಿಕೆಯಲ್ಲಿ ಅವರ ಬಗ್ಗೆ ಮೆಚ್ಚುಗೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ