ಆ್ಯಪ್ನಗರ

ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ರಾಜ್ಯ ಸರಕಾರದ ನಿರ್ಣಯ!

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮೆರಾಗಳ ಅಳವಡಿಕೆ ಹಾಗೂ ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಗೃಹ ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯು ಕೈಗೊಂಡಿದೆ.

Vijaya Karnataka Web 8 Jul 2020, 9:11 pm
ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮೆರಾಗಳ ಅಳವಡಿಕೆ ಹಾಗೂ ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಗೃಹ ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯು ಕೈಗೊಂಡಿದೆ.
Vijaya Karnataka Web highway camara


ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆಯು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಸುದೀರ್ಘ ಸಮಾಲೋಚನೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

30 ಸಾವಿರ ಗಡಿ ಸಮೀಪಿಸಿದ ಕೊರೊನಾ: ಬೆಂಗಳೂರಲ್ಲಿ ಸೋಂಕು ಉಲ್ಬಣ, ಸಾವಿನ ಸಂಖ್ಯೆಯಲ್ಲೂ ಹೆಚ್ಚಳ!

ಪ್ರಮುಖ ನಿರ್ಣಯಗಳು
  • - ಮೋಟಾರು ವಾಹನ ಕಾಯಿದೆಯಡಿ ಸಂಗ್ರಹವಾಗುವ ದಂಡದ ಮೊತ್ತವನ್ನು ರಸ್ತೆ ಸುರಕ್ಷತೆಗೆ ಶೇ.100 ರಷ್ಟು ಮೀಸಲಿರಿಸುವುದು.
  • - ದಂಡ ರೂಪದಲ್ಲಿವಸೂಲಿ ಮಾಡುತ್ತಿರುವ ಹಣವನ್ನು ರಸ್ತೆ ಸುರಕ್ಷತೆ ಕಾರ್ಯಕ್ರಮಕ್ಕೆ ಬಳಸಲು ಪ್ರತ್ಯೇಕ ಖಾತೆ ತೆರೆಯುವುದು
  • - ಸುಪ್ರೀಂ ಕೋರ್ಟ್‌ನ ಸಮಿತಿ ನೀಡಿರುವ ನಿರ್ದೇಶನಗಳನ್ನು ಪೊಲೀಸ್‌ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಪಾಲಿಸುವುದು.
  • - ರಾಜ್ಯದಲ್ಲಿರುವ ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
  • - ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿವಾಹನಗಳ ಲೇನ್‌ಡಿಸಿಪ್ಲೀನ್‌ ಜಾರಿಗೊಳಿಸುವುದು.
  • - ರಸ್ತೆ ಸುರಕ್ಷತೆ ಸಂಬಂಧ ಎರಡು ಇಲಾಖೆಗಳು ರೂಪಿಸಿರುವ ಕ್ರಿಯಾ ಯೋಜನೆ ಪರಿಶೀಲಿಸಿ ಯೋಜನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವುದು.
  • - ರಸ್ತೆಗಳಲ್ಲಿ ಕ್ಯಾಮೆರಾ ಅಳವಡಿಕೆ ಜತೆಗೆ ಇನ್ಮುಂದೆ ರಸ್ತೆ ಕಾಮಗಾರಿ ಕೈಗೊಳ್ಳುವ ವೇಳೆ ಕ್ಯಾಮೆರಾ ಅಳವಡಿಕೆ ಅಂಶ ಅಳವಡಿಸಿಕೊಂಡು ಯೋಜನೆ ಸಿದ್ಧಪಡಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ.
  • - ನಿರ್ಭಯ ಯೋಜನೆಯಡಿ ಜಾರಿಗೊಳಿಸುತ್ತಿರುವ ವೆಹಿಕಲ್‌ ಲೋಕೇಷನ್‌ ಟ್ರಾಕಿಂಗ್‌ ಸಿಸ್ಟಂ ಅನ್ನು ಪರಿಣಾಮಕಾರಿಯಾಗಿ ರೂಪಿಸಲು ಸೂಚನೆ.
ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ: ಮೂರು ದಿನ ಆರೆಂಜ್‌ ಅಲರ್ಟ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ