ಆ್ಯಪ್ನಗರ

ನಾನೇನು ಮಾಡಲು ಬರಲ್ಲ; ಶಾಸಕರು ಕ್ರಮಬದ್ಧವಾಗಿಯೇ ರಾಜೀನಾಮೆ ಸಲ್ಲಿಸಬೇಕು: ರಾಜ್ಯಪಾಲರ ಸ್ಪಷ್ಟನೆ

ಸಮ್ಮಿಶ್ರ ಸರಕಾರದ ಹಲವು ಶಾಸಕರು ರಾಜೀನಾಮೆ ನೀಡುತ್ತಿದ್ದು, ಇದರಿಂದ ಮೈತ್ರಿ ಸರಕಾರ ಮ್ಯಾಜಿಕ್‌ ನಂಬರ್‌ ಅನ್ನು ಕಳೆದುಕೊಂಡಿದ್ದು, ಪಕ್ಷೇತರರು ಸಹ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಬಿಜೆಪಿಗೆ ಮ್ಯಾಜಿಕ್ ನಂಬರ್‌ ಸಿಕ್ಕಂತಾಗಿದೆ. ಈ ಹಿನ್ನೆಲೆ ಬಿಜೆಪಿ, ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಒತ್ತಟದ ತಂತ್ರ ಅನುಸರಿಸುತ್ತಿದೆ.

Vijaya Karnataka Web 10 Jul 2019, 4:35 pm
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಮುಂದುವರಿದಿದೆ. ಈ ಹಿನ್ನೆಲೆ 14 ಶಾಸಕರು ರಾಜೀನಾಮೆ ಸಲ್ಲಿಸಿದ್ದರೂ ಕುಮಾರಸ್ವಾಮಿ ಅಧಿಕಾರ ನಡೆಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಹಸ್ತಕ್ಷೇಪ ವಹಿಸುವಂತೆ ತಿಳಿಸಿತ್ತು. ಆದರೆ, ರಾಜ್ಯಪಾಲರು ಸೂಕ್ತ ಪ್ರತಿಕ್ರಿಯೆ ನೀಡಿಲ್ಲ.
Vijaya Karnataka Web VAJUBHAI VALA


ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ ಎಂಬ ಸ್ಪೀಕರ್ ರಮೇಶ್‌ಕುಮಾರ್ ನಿರ್ಧಾರಕ್ಕೆ ಅಸಮಾಧಾನಗೊಂಡ ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಆದರೆ, ಶಾಸಕರು ಕ್ರಮಬದ್ಧವಾಗಿ ರಾಜೀನಾಮೆ ನೀಡಬೇಕು. ಈ ವಿಷಯದಲ್ಲಿ ನಾನು ಏನು ಮಾಡಲು ಬರುವುದಿಲ್ಲ ಎಂದು ರಾಜ್ಯಪಾಲರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪ ನೇತೃತ್ವದ ನಿಯೋಗ ವಿಧಾನಸಭಾ ಸ್ಪೀಕರ್‌ಗೆ ಮನವಿ ಸಲ್ಲಿಸಿದೆ. ರಾಜೀನಾಮೆ ಅಂಗೀಕರಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಜುಲೈ 6, 2019 ಶನಿವಾರದಿಂದ ಸಮ್ಮಿಶ್ರ ಸರಕಾರದ ಹಲವು ಶಾಸಕರು ರಾಜೀನಾಮೆ ನೀಡುತ್ತಿದ್ದು, ಇದರಿಂದ ಮೈತ್ರಿ ಸರಕಾರ ಮ್ಯಾಜಿಕ್‌ ನಂಬರ್‌ ಅನ್ನು ಕಳೆದುಕೊಂಡಿದ್ದು, ಪಕ್ಷೇತರರು ಸಹ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಬಿಜೆಪಿಗೆ ಮ್ಯಾಜಿಕ್ ನಂಬರ್‌ ಸಿಕ್ಕಂತಾಗಿದೆ. ಈ ಹಿನ್ನೆಲೆ ಬಿಜೆಪಿ, ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ