ಬೆಂಗಳೂರು: ಸಂಪುಟ ವಿಸ್ತರಣೆ 'ಕನ್ನಡಿಗಂಟು' ಎಂಬ ಕಾಂಗ್ರೆಸ್ ಶಾಸಕರ ಕಳವಳದ ಮಧ್ಯೆಯೇ ಕೈ ಪಾಳಯದ ಪ್ರಮುಖ ನಾಯಕರು ಡಿ.21ರಂದು ದಿಲ್ಲಿಗೆ ದೌಡಾಯಿಸಲು ಮುಂದಾಗಿದ್ದು, ಮುನಿಸಿಕೊಂಡ ಶಾಸಕರ ಮೂಗಿಗೆ ಮತ್ತೊಂದು ಸುತ್ತಿನ ತುಪ್ಪ ಸವರಲು ಹೊಸ ಸೂತ್ರ ಸಿದ್ಧಪಡಿಸಲಾಗುತ್ತಿದೆ!
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಕ್ತಾಯದ ದಿನವೇ ಡಿಸಿಎಂ ಜಿ. ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದಿಲ್ಲಿಗೆ ತೆರಳಿ ವರಿಷ್ಠರ ಭೇಟಿಗೆ ನಿರ್ಧರಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಡಿ.22ರಂದೇ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸಂಪುಟ ವಿಸ್ತರಣೆಗೆ ಜೆಡಿಎಸ್ನಿಂದಲೂ 'ತಾರಾನುಕೂಲದ ಹೊಂದಾಣಿಕೆ'ಯಾಗಿದೆ ಎಂದು ತಿಳಿದು ಬಂದಿದೆ.
ಐವರ ಭರ್ತಿ
ಜಾತಿ ಹಾಗೂ ಪ್ರಾದೇಶಿಕ ಸಮತೋಲನ ಸಾಧಿಸಲು ಐವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ತಲಾ ಒಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ ಎಡಗೈ ಸಮುದಾಯಕ್ಕೆ ಈ ಬಾರಿ ಅವಕಾಶ ಸಿಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಅದೇ ರೀತಿ 30 ಪ್ರಮುಖ ನಿಗಮ-ಮಂಡಳಿಗಳಿಗೆ ಶಾಸಕರನ್ನೇ ಅಧ್ಯಕ್ಷ ರನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ. 20 ಕಾಂಗ್ರೆಸ್ಗೆ ಹಾಗೂ 10 ಜೆಡಿಎಸ್ ಪಾಳಯಕ್ಕೆ ಬಿಟ್ಟುಕೊಡಲಾಗುತ್ತದೆ. ಆದರೆ ಈ ಪಟ್ಟಿಗೂ ಹೈಕಮಾಂಡ್ ಅಂಕಿತ ಅನಿವಾರ್ಯ. ಜತೆಗೆ 10 ಸಂಸದೀಯ ಕಾರ್ಯದರ್ಶಿಗಳ ನೇಮಕವಾಗಲಿದ್ದು, 6 ಕಾಂಗ್ರೆಸ್ ಪಾಲಾದರೆ 4 ಜೆಡಿಎಸ್ ಪಾಳಯಕ್ಕೆ ಸಿಗಲಿದೆ. ಜತೆಗೆ ಕಾಂಗ್ರೆಸ್ ಕಡೆಯಿಂದ ಇನ್ನೊಂದು ಕೋಟಾದಲ್ಲಿ, ದಿಲ್ಲಿ ವಿಶೇಷ ಪ್ರತಿನಿಧಿ ನೇಮಕಕ್ಕೆ ಚಿಂತನೆ ನಡೆದಿದೆ. 6 ಖಾಲಿ ಸ್ಥಾನಗಳ ಪೈಕಿ ಐದನ್ನು ಭರ್ತಿ ಮಾಡಿ ಒಂದು ಸ್ಥಾನ ಖಾಲಿ ಉಳಿಸಿಕೊಳ್ಳುವುದು ಕಾಂಗ್ರೆಸ್ನ ತಂತ್ರವಾಗಿದೆ.
ಶಂಕರ್ಗೆ ಕೊಕ್?
ಈ ಮಧ್ಯೆ ಅರಣ್ಯ ಸಚಿವ ಆರ್. ಶಂಕರ್ ಅವರನ್ನು ಕೈಬಿಟ್ಟು ಉತ್ತರ ಕರ್ನಾಟಕ ಭಾಗದ ಕುರುಬ ಸಮುದಾಯಕ್ಕೆ ಸೇರಿದ ಶಾಸಕರಿಗೆ ಅವಕಾಶ ನೀಡಬೇಕೆಂಬ ಚಿಂತನೆ ನಡೆದಿದೆ. ಶಂಕರ್ ಉಳಿಸಿಕೊಂಡರೆ ಮುಳಬಾಗಿಲು ಶಾಸಕ ನಾಗೇಶ್ ಅವರಿಗೂ ಸಚಿವ ಸ್ಥಾನ ಕೊಡಬೇಕಾಗುತ್ತದೆ. ಹೀಗಾಗಿ ಪಕ್ಷೇತರರಾಗಿ ಗೆದ್ದು ಸರಕಾರಕ್ಕೆ ಬೆಂಬಲಿಸಿರುವ ಶಂಕರ್ ಹಾಗೂ ನಾಗೇಶ್ ಅವರನ್ನು ಪ್ರಮುಖ ನಿಗಮಗಳಿಗೆ ಅಧ್ಯಕ್ಷ ರನ್ನಾಗಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಕಾಂಗ್ರೆಸ್ ಪಾಲಿಗೆ!
ಕಾಂಗ್ರೆಸ್ನ ಹಿರಿಯ ಶಾಸಕರೊಬ್ಬರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಬಗ್ಗೆ ಪ್ರಯತ್ನ ತೀವ್ರಗೊಂಡಿದೆ.
ಕ್ಯಾಬಿನೇಟ್ ದರ್ಜೆಯ ಈ ಹುದ್ದೆಗೆ ಕಾಂಗ್ರೆಸ್ನ ಹಿರಿಯ ಶಾಸಕರನ್ನು ನೇಮಕ ಮಾಡಬೇಕು. ಆಗ ಮುನಿಸುಗೊಂಡಿರುವ ಹಿರಿಯರ ಪೈಕಿ ಕೆಲವರನ್ನಾದರೂ ತಣ್ಣಗೆ ಮಾಡಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿದ್ದು, ಈ ಬಗ್ಗೆ ಸಿಎಂ ಕುಮಾರಸ್ವಾಮಿ ಜತೆ ಚರ್ಚೆ ನಡೆಸಲಾಗುತ್ತದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಕ್ತಾಯದ ದಿನವೇ ಡಿಸಿಎಂ ಜಿ. ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದಿಲ್ಲಿಗೆ ತೆರಳಿ ವರಿಷ್ಠರ ಭೇಟಿಗೆ ನಿರ್ಧರಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಡಿ.22ರಂದೇ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸಂಪುಟ ವಿಸ್ತರಣೆಗೆ ಜೆಡಿಎಸ್ನಿಂದಲೂ 'ತಾರಾನುಕೂಲದ ಹೊಂದಾಣಿಕೆ'ಯಾಗಿದೆ ಎಂದು ತಿಳಿದು ಬಂದಿದೆ.
ಐವರ ಭರ್ತಿ
ಜಾತಿ ಹಾಗೂ ಪ್ರಾದೇಶಿಕ ಸಮತೋಲನ ಸಾಧಿಸಲು ಐವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ತಲಾ ಒಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ ಎಡಗೈ ಸಮುದಾಯಕ್ಕೆ ಈ ಬಾರಿ ಅವಕಾಶ ಸಿಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಅದೇ ರೀತಿ 30 ಪ್ರಮುಖ ನಿಗಮ-ಮಂಡಳಿಗಳಿಗೆ ಶಾಸಕರನ್ನೇ ಅಧ್ಯಕ್ಷ ರನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ. 20 ಕಾಂಗ್ರೆಸ್ಗೆ ಹಾಗೂ 10 ಜೆಡಿಎಸ್ ಪಾಳಯಕ್ಕೆ ಬಿಟ್ಟುಕೊಡಲಾಗುತ್ತದೆ. ಆದರೆ ಈ ಪಟ್ಟಿಗೂ ಹೈಕಮಾಂಡ್ ಅಂಕಿತ ಅನಿವಾರ್ಯ. ಜತೆಗೆ 10 ಸಂಸದೀಯ ಕಾರ್ಯದರ್ಶಿಗಳ ನೇಮಕವಾಗಲಿದ್ದು, 6 ಕಾಂಗ್ರೆಸ್ ಪಾಲಾದರೆ 4 ಜೆಡಿಎಸ್ ಪಾಳಯಕ್ಕೆ ಸಿಗಲಿದೆ. ಜತೆಗೆ ಕಾಂಗ್ರೆಸ್ ಕಡೆಯಿಂದ ಇನ್ನೊಂದು ಕೋಟಾದಲ್ಲಿ, ದಿಲ್ಲಿ ವಿಶೇಷ ಪ್ರತಿನಿಧಿ ನೇಮಕಕ್ಕೆ ಚಿಂತನೆ ನಡೆದಿದೆ. 6 ಖಾಲಿ ಸ್ಥಾನಗಳ ಪೈಕಿ ಐದನ್ನು ಭರ್ತಿ ಮಾಡಿ ಒಂದು ಸ್ಥಾನ ಖಾಲಿ ಉಳಿಸಿಕೊಳ್ಳುವುದು ಕಾಂಗ್ರೆಸ್ನ ತಂತ್ರವಾಗಿದೆ.
ಶಂಕರ್ಗೆ ಕೊಕ್?
ಈ ಮಧ್ಯೆ ಅರಣ್ಯ ಸಚಿವ ಆರ್. ಶಂಕರ್ ಅವರನ್ನು ಕೈಬಿಟ್ಟು ಉತ್ತರ ಕರ್ನಾಟಕ ಭಾಗದ ಕುರುಬ ಸಮುದಾಯಕ್ಕೆ ಸೇರಿದ ಶಾಸಕರಿಗೆ ಅವಕಾಶ ನೀಡಬೇಕೆಂಬ ಚಿಂತನೆ ನಡೆದಿದೆ. ಶಂಕರ್ ಉಳಿಸಿಕೊಂಡರೆ ಮುಳಬಾಗಿಲು ಶಾಸಕ ನಾಗೇಶ್ ಅವರಿಗೂ ಸಚಿವ ಸ್ಥಾನ ಕೊಡಬೇಕಾಗುತ್ತದೆ. ಹೀಗಾಗಿ ಪಕ್ಷೇತರರಾಗಿ ಗೆದ್ದು ಸರಕಾರಕ್ಕೆ ಬೆಂಬಲಿಸಿರುವ ಶಂಕರ್ ಹಾಗೂ ನಾಗೇಶ್ ಅವರನ್ನು ಪ್ರಮುಖ ನಿಗಮಗಳಿಗೆ ಅಧ್ಯಕ್ಷ ರನ್ನಾಗಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಕಾಂಗ್ರೆಸ್ ಪಾಲಿಗೆ!
ಕಾಂಗ್ರೆಸ್ನ ಹಿರಿಯ ಶಾಸಕರೊಬ್ಬರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಬಗ್ಗೆ ಪ್ರಯತ್ನ ತೀವ್ರಗೊಂಡಿದೆ.
ಕ್ಯಾಬಿನೇಟ್ ದರ್ಜೆಯ ಈ ಹುದ್ದೆಗೆ ಕಾಂಗ್ರೆಸ್ನ ಹಿರಿಯ ಶಾಸಕರನ್ನು ನೇಮಕ ಮಾಡಬೇಕು. ಆಗ ಮುನಿಸುಗೊಂಡಿರುವ ಹಿರಿಯರ ಪೈಕಿ ಕೆಲವರನ್ನಾದರೂ ತಣ್ಣಗೆ ಮಾಡಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿದ್ದು, ಈ ಬಗ್ಗೆ ಸಿಎಂ ಕುಮಾರಸ್ವಾಮಿ ಜತೆ ಚರ್ಚೆ ನಡೆಸಲಾಗುತ್ತದೆ.