ಆ್ಯಪ್ನಗರ

ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ದೇಶದ ಹಲವೆಡೆ ಮತ್ತೆ ಸಾಧಾರಣದಿಂದ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ ತೆಲಂಗಾಣ, ಗೋವ, ಈಶಾನ್ಯ ಭಾರತ, ಆಂಧ್ರದ ತೀರ, ರಾಜ್ಯದ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Vijaya Karnataka Web 20 Aug 2018, 10:10 pm
ಹೊಸದಿಲ್ಲಿ: ದೇಶದ ಹಲವೆಡೆ ಮತ್ತೆ ಸಾಧಾರಣದಿಂದ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ ತೆಲಂಗಾಣ, ಗೋವ, ಈಶಾನ್ಯ ಭಾರತ, ಆಂಧ್ರದ ತೀರ, ರಾಜ್ಯದ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Vijaya Karnataka Web rain99


ಪೂರ್ವ ಮತ್ತು ಪಶ್ಚಿಮ ಅರೇಬಿಯನ್ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಮುಂದುವರಿಯುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬುಧವಾರ ಉತ್ತರ ಭಾರತದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು, ರಾಜ್ಯದಲ್ಲಿ ಹೆಚ್ಚು ಮಳೆಯಿರುವುದಿಲ್ಲ. ಆದರೆ ಸಮುದ್ರ ಮಾತ್ರ ಹೆಚ್ಚಿನ ಅಬ್ಬರ ಹೊಂದಿರಲಿದೆ. ಹೀಗಾಗಿ ಮೀನುಗಾರರು ಸೂಚನೆ ಪಾಲಿಸುವಂತೆ ಹವಾಮಾನ ಇಲಾಖೆ ಹೇಳಿದೆ.

ಗುರುವಾರ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ. ಆದರೆ ಅರಬ್ಬಿ ಸಮುದ್ರದಲ್ಲಿ ಮಾತ್ರ ಪ್ರಕ್ಷುಬ್ಧ ಸ್ಥಿತಿ ಇರಲಿದೆ. ಉಳಿದಂತೆ ಶುಕ್ರವಾರ ರಾಜ್ಯದಲ್ಲಿ ಮಳೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ