ಆ್ಯಪ್ನಗರ

ಪ್ರವಾಸೋದ್ಯಮ ರಾಯಭಾರಿಯಾಗಿ ಯದುವೀರ್ ಕೃಷ್ಣದತ್ತ ಒಡೆಯರ್

ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಮತ್ತು ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳನ್ನು ಕೈಗೊಳ್ಳಲು ಇದರಿಂದ ಅನುಕೂಲವಾಗಲಿದ್ದು, ರಾಜ್ಯ ಸರಕಾರ ಯದುವೀರ್ ಅವರಿಗೆ ಸಹಕಾರ ನೀಡಲಿದೆ.

Vijaya Karnataka Web 24 Sep 2018, 8:08 pm
ಬೆಂಗಳೂರು: ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿಯನ್ನಾಗಿ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ರಾಜ್ಯದ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ ನೇಮಕ ಮಾಡಿದೆ.
Vijaya Karnataka Web Yaduveer 2.


ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಮತ್ತು ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳನ್ನು ಕೈಗೊಳ್ಳಲು ಇದರಿಂದ ಅನುಕೂಲವಾಗಲಿದ್ದು, ರಾಜ್ಯ ಸರಕಾರ ಯದುವೀರ್ ಅವರಿಗೆ ಸಹಕಾರ ನೀಡಲಿದೆ.

ಯದುವೀರ್ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮೈಸೂರು ಭಾಗದಲ್ಲಿನ ಪಾರಂಪರಿಕ, ಐತಿಹಾಸಿಕ ತಾಣಗಳು ಮತ್ತು ಪ್ರವಾಸಿ ಆಕರ್ಷಣೆಗಳ ಬಗ್ಗೆ ಹೆಚ್ಚು ಪ್ರಚುರಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ