ಆ್ಯಪ್ನಗರ

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ ಸಿಐಡಿ ತನಿಖೆಗೆ ಆದೇಶ

ರಾಯಚೂರಿನ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ...

Vijaya Karnataka 21 Apr 2019, 5:00 am
ಬೆಂಗಳೂರು: ರಾಯಚೂರಿನ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ವಹಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಶನಿವಾರ ಆದೇಶ ಹೊರಡಿಸಿದ್ದಾರೆ.
Vijaya Karnataka Web student death cases handover cod
ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ ಸಿಐಡಿ ತನಿಖೆಗೆ ಆದೇಶ


ವಿದ್ಯಾರ್ಥಿನಿ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯಿಂದ ಮರಣಪತ್ರವನ್ನು ಬರೆಸಿ, ಕೊಲೆ ಮಾಡಿ ಶವವನ್ನು ಮರಕ್ಕೆ ನೇತು ಹಾಕಲಾಗಿದೆ. ಸಾವಿನ ಕುರಿತು ಸತ್ಯಾಸತ್ಯತೆ ಹೊರ ಬರಬೇಕು ಎಂದು ರಾಜ್ಯದೆಲ್ಲೆಡೆ ವ್ಯಾಪಕ ಜನಾಂದೋಲನ ಆರಂಭವಾಗಿದೆ. ಅಲ್ಲದೇ, ದೇಶದ ವಿವಿಧೆಡೆಗಳಿಂದಲೂ ತನಿಖೆಗೆ ಒತ್ತಾಯ ಕೇಳಿ ಬಂದಿದೆ. ಚಿತ್ರರಂಗದ ಪ್ರಮುಖರಿಂದ ಹಿಡಿದು ಸಮಾಜದ ಎಲ್ಲ ವರ್ಗದ ಗಣ್ಯರು ಸಾವಿನ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟರ್‌ ಸೇರಿದಂತೆ ಜಾಲತಾಣಗಳಲ್ಲಿ ಹ್ಯಾಷ್‌ಟ್ಯಾಗ್‌ ಮೂಲಕ ವ್ಯಾಪಕ ಆಂದೋಲನ ನಡೆಯುತ್ತಿದೆ ಎಂದರು.

ಮೃತ ವಿದ್ಯಾರ್ಥಿನಿ ಪಾಲಕರು ರಾಯಚೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು. ಕೋರಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ಮಾತನಾಡಿ ಅಗತ್ಯವಿದ್ದರೆ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಕೋರಿದ್ದರು. ಪ್ರಕರಣದ ಸಂಬಂಧ ರಾಯಚೂರು ಪೊಲೀಸರ ತನಿಖೆ ಕುರಿತು ಐಜಿಪಿ ನಂಜುಂಡಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದ ಗೃಹ ಸಚಿವರು, ಸಿಐಡಿ ತನಿಖೆಗೆ ನೀಡಲು ನಿರ್ಧರಿಸಿದ್ದರು. ಸಚಿವರ ಸೂಚನೆ ಮೇರೆಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು ಅವರು ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿ ವಹಿಸಿದ್ದಾರೆ. ಭಾನುವಾರ ರಾಯಚೂರಿಗೆ ತೆರಳಲಿರುವ ಸಿಐಡಿ ತಂಡ, ತನಿಖೆ ಆರಂಭಿಸಲಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸಮಗ್ರ ತನಿಖೆಗಾಗಿ ಸಿಐಡಿಗೆ ವಹಿಸಿ ಪೊಲೀಸ್‌ ಮಹಾನಿರ್ದೇಶಕರು ಸಿಐಡಿಗೆ ವಹಿಸಿದ್ದಾರೆ.

- ಕಮಲ್‌ಪಂತ್‌, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ, ಕಾನೂನು ಮತ್ತು ಸುವ್ಯವಸ್ಥೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ