ಆ್ಯಪ್ನಗರ

ಬಲೆ ಮೀನುಗಾರಿಕೆ ಸಹಾಯಧನ ಒಂದು ಸಾವಿರ ಮಂದಿಗೆ ವಿಸ್ತರಣೆ: ಸಿಎಂ ಬೊಮ್ಮಾಯಿ

'ಮೀನು ರಫ್ತು ಮಾಡುವಲ್ಲಿಆಂಧ್ರಪ್ರದೇಶ ಮುಂದಿದ್ದು, ಕರ್ನಾಟಕ ಕೂಡ ಹೆಚ್ಚಿನ ಸಾಧನೆ ಮಾಡಬೇಕು. ಈಗಿರುವ ಮೀನುಗಾರಿಕೆ ಚಟುವಟಿಕೆಗಳನ್ನು ವಿಸ್ತರಿಸಿ, ಈಗಿನ ರಫ್ತು ಪ್ರಮಾಣಕ್ಕಿಂತ ಮೂರುಪಟ್ಟು ಹೆಚ್ಚು ಮಾಡಬೇಕು. ಇದಕ್ಕಾಗಿ ಮುಂದಿನ ಆಯವ್ಯಯದಲ್ಲಿ ಅನುದಾನ ಮೀಸಲಿರಿಸಲಾಗುವುದು' ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 'ಮೀನುಗಾರರು ಆರ್ಥಿಕವಾಗಿ ಸಬಲರಾಗಲು ಐದು ಸಾವಿರ ಮೀನುಗಾರರ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಜನವರಿಯೊಳಗೆ ಈ ಮನೆಗಳ ನಿರ್ಮಾಣ ಕೆಲಸ ಪೂರ್ಣಗೊಳಿಸಬೇಕು'' ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

Edited byಚೇತನ್ ಓ.ಆರ್. | Vijaya Karnataka Web 17 Oct 2022, 11:12 am
ಬೆಂಗಳೂರು: ಬಲೆ ಮೂಲಕ ಮೀನುಗಾರಿಕೆ ಮಾಡಲು 3 ಲಕ್ಷ ರೂ.ಗಳ ಸಹಾಯಧನವನ್ನು ಒಂದು ಸಾವಿರ ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Vijaya Karnataka Web ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ


'ಸ್ತ್ರೀ ಸಾಮರ್ಥ್ಯ ಯೋಜನೆಯಡಿ 3 ರಿಂದ 5 ಲಕ್ಷ ರೂ. ನೆರವು ನೀಡಲಾಗುತ್ತಿದ್ದು, ಒಳನಾಡು ಮೀನುಗಾರಿಕೆ ಕೈಗೊಳ್ಳಲು ಮುಂದೆ ಬರುವ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವಾಮಿ ವಿವೇಕಾನಂದ ಯೋಜನೆಯಡಿ ನೀಡುವ ಸಹಾಯಧನವನ್ನು ಸಾವಿರ ಮಂದಿಗೆ ವಿಸ್ತರಿಸಲಾಗುವುದು'' ಎಂದರು.

'ಮೀನು ರಫ್ತು ಮಾಡುವಲ್ಲಿಆಂಧ್ರಪ್ರದೇಶ ಮುಂದಿದ್ದು, ಕರ್ನಾಟಕ ಕೂಡ ಹೆಚ್ಚಿನ ಸಾಧನೆ ಮಾಡಬೇಕು. ಈಗಿರುವ ಮೀನುಗಾರಿಕೆ ಚಟುವಟಿಕೆಗಳನ್ನು ವಿಸ್ತರಿಸಿ, ಈಗಿನ ರಫ್ತು ಪ್ರಮಾಣಕ್ಕಿಂತ ಮೂರುಪಟ್ಟು ಹೆಚ್ಚು ಮಾಡಬೇಕು. ಇದಕ್ಕಾಗಿ ಮುಂದಿನ ಆಯವ್ಯಯದಲ್ಲಿ ಅನುದಾನ ಮೀಸಲಿರಿಸಲಾಗುವುದು' ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

'ಮೀನುಗಾರರು ಆರ್ಥಿಕವಾಗಿ ಸಬಲರಾಗಲು ಐದು ಸಾವಿರ ಮೀನುಗಾರರ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಜನವರಿಯೊಳಗೆ ಈ ಮನೆಗಳ ನಿರ್ಮಾಣ ಕೆಲಸ ಪೂರ್ಣಗೊಳಿಸಬೇಕು'' ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ತಳಿಗಳನ್ನು ಒಳನಾಡು ಮೀನುಗಾರಿಕೆಯಲ್ಲಿ ಪ್ರಯೋಗ ಮಾಡಿ ಯಶಸ್ವಿಯಾಗಿಸಬೇಕು. ಹೊಸ ತಳಿಗಳನ್ನು ತಯಾರು ಮಾಡಿದರೆ ದೊಡ್ಡ ಮಾರುಕಟ್ಟೆ ಲಭ್ಯವಿದೆ' ಎಂದರು.

ಮೀನು ಸಸ್ಯಾಹಾರಿ, ತಿನ್ನುವವರು ಮಾಂಸಾಹಾರಿ:

'ಶತಮಾನಗಳಿಂದ ಮೀನು ಮನುಷ್ಯನ ಆಹಾರವಾಗಿದೆ. ಮೀನು ಸಸ್ಯಾಹಾರಿ. ಮೀನನ್ನು ತಿನ್ನುವವರು ಮಾಂಸಾಹಾರಿಗಳು. ವಿದೇಶಗಳಲ್ಲಿ ಮೀನನ್ನು ಸಸ್ಯಾಹಾರ ಎಂದು ವ್ಯಾಖ್ಯಾನ ಮಾಡುತ್ತಾರೆ' ಎಂದು ಸಿಎಂ ನುಡಿದರು.

ಸದಾ ನೆರವು

'ಕರಾವಳಿ ಪಕ್ಕದಲ್ಲಿಕಡಲ ಕೊರೆತವಾಗಿ ಹೂಳು ತುಂಬಿ ತೊಂದರೆಯಾಗುತ್ತಿರುವುದರಿಂದ ಎಂಟು ಮೀನುಗಾರಿಕೆ ಬಂದರುಗಳಿಗೆ ವಿಶೇಷ ಅನುದಾನ ನೀಡಿ ಹೂಳು ತೆಗೆಯಲು ಈ ವರ್ಷ ಅನುಮೋದನೆ ನೀಡಲಾಗಿದೆ. ಮೀನುಗಾರರಿಗೆ ಡೀಸೆಲ್‌ ಹಾಗೂ ಸೀಮೆ ಎಣ್ಣೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಪ್ರವಾಹ ಬಂದ ಸಂದರ್ಭದಲ್ಲಿ ಮೀನುಗಾರರ ಹಡಗುಗಳು ಹಾಳಾಗುತ್ತವೆ. ಅದಕ್ಕೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಅನುದಾನ ನೀಡಲು ಅವಕಾಶವಿಲ್ಲ. ರಾಜ್ಯ ಸರಕಾರದಿಂದಲೇ ಮೀನುಗಾರರ ದೋಣಿಗಳಿಗೆ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ. ಒಳನಾಡು ಮೀನುಗಾರಿಕೆಗೂ ಪ್ರೋತ್ಸಾಹ ನೀಡಲು 5,600 ಗ್ರಾಮ ಪಂಚಾಯಿತಿಗಳಲ್ಲಿರುವ 5,600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ ನೀಡಲಾಗಿದೆ' ಎಂದರು.

ಮೀನುಗಾರಿಕೆ ಸಚಿವ ಎಸ್‌. ಅಂಗಾರ ಮಾತನಾಡಿ, 'ಮೀನು ಕೃಷಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸಮಾವೇಶ ಆಯೋಜಿಸಲಾಗಿದೆ. ಮೀನುಗಾರರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯೋನ್ಮುಖವಾಗಿದ್ದಾರೆ'' ಎಂದರು. ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ್‌, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್‌ ಸಂಸ್ಥಾಪಕ ಸಿ.ಎಸ್‌. ಸುಧೀರ್‌, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್‌ ಮತ್ತಿತರರು ಉಪಸ್ಥಿತರಿದ್ದರು.

ಸಚಿವ ನಾಗೇಶ್‌ ವಿರುದ್ಧ ಸಿಎಂ ಗರಂ

ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡುತ್ತಿದ್ದಾಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪಕ್ಕದಲ್ಲಿದ್ದವರ ಜತೆ ಮಾತನಾಡುತ್ತಿದ್ದರು. ಒಂದೆರಡು ಸಲ ಇದನ್ನು ಗಮನಿಸಿದ ಸಿಎಂ ನಂತರ ಕೋಪಗೊಂಡು, ''ನಾಗೇಶ್‌ ಒಂದು ನಿಮಿಷ. ನಿಮಗೆ ಮಾತನಾಡುವುದಿದ್ದರೆ ಹೊರಗೆ ಕರೆದುಕೊಂಡು ಹೋಗಿ ಮಾತನಾಡಬಹುದು. ನಾನು ಐದು ನಿಮಿಷದಲ್ಲಿಮಾತು ಮುಗಿಸುತ್ತೇನೆ'' ಎಂದು ಸಿಟ್ಟಾಗಿ ಹೇಳಿದಾಗ ನಾಗೇಶ್‌ ಮುಜುಗರಕ್ಕೆ ಒಳಗಾಗಿ ಮೌನವಾಗಿ ಕುಳಿತ ಪ್ರಸಂಗ ನಡೆಯಿತು.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ