ಆ್ಯಪ್ನಗರ

ರಾಮಲಿಂಗಾರೆಡ್ಡಿ ಬೆನ್ನಲ್ಲೇ ಡಾ.ಸುಧಾಕರ್‌ ವಾಪಸ್‌ ?

ಹಿರಿಯ ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಮತ್ತೊಬ್ಬ 'ಕೈ' ಶಾಸಕ ಡಾ.ಸುಧಾಕರ್‌ ಕೂಡ ಮರಳುವ ಸಾಧ್ಯತೆ ದಟ್ಟವಾಗಿದೆ.

Vijaya Karnataka 18 Jul 2019, 5:00 am
ಬೆಂಗಳೂರು : ಹಿರಿಯ ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಮತ್ತೊಬ್ಬ 'ಕೈ' ಶಾಸಕ ಡಾ.ಸುಧಾಕರ್‌ ಕೂಡ ಮರಳುವ ಸಾಧ್ಯತೆ ದಟ್ಟವಾಗಿದೆ.
Vijaya Karnataka Web sudhakar return to congress
ರಾಮಲಿಂಗಾರೆಡ್ಡಿ ಬೆನ್ನಲ್ಲೇ ಡಾ.ಸುಧಾಕರ್‌ ವಾಪಸ್‌ ?


ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಈ ದಿಢೀರ್‌ ಬೆಳವಣಿಗೆ ಮೈತ್ರಿ ಪಾಳಯದ ಆತ್ಮವಿಶ್ವಾಸ ಹೆಚ್ಚಿಸಿದ್ದರೆ, ಪ್ರತಿಪಕ್ಷ ಬಿಜೆಪಿ ಉತ್ಸಾಹಕ್ಕೆ ಸ್ವಲ್ಪಮಟ್ಟಿಗೆ ಬ್ರೇಕ್‌ ಬಿದ್ದಿದೆ. ರಾಜೀನಾಮೆ ನೀಡಿದ ಬಳಿಕ ಅಜ್ಞಾತ ಸ್ಥಳದಲ್ಲಿದ್ದ ಡಾ.ಸುಧಾಕರ್‌ ಬುಧವಾರ ಕಾಂಗ್ರೆಸ್‌ ನಾಯಕರ ಸಂಪರ್ಕಕ್ಕೆ ಸಿಕ್ಕಿದ್ದು ರಾಜೀನಾಮೆ ವಾಪಸ್‌ ಪಡೆಯಲು ಸಮ್ಮತಿಸಿದ್ದಾರೆ. ರಹಸ್ಯ ಸ್ಥಳದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.ಹಿರಿಯ ಸಚಿವರೊಬ್ಬರು ಡಾ.ಸುಧಾಕರ್‌ ಮನವೊಲಿಸಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿದರು ಎಂದು ತಿಳಿದುಬಂದಿದೆ. ಡಾ.ಸುಧಾಕರ್‌ ಅವರು ಬಿಜೆಪಿಗೆ ಕೈಕೊಟ್ಟು ಮಾತೃಪಕ್ಷ ಕಾಂಗ್ರೆಸ್‌ಗೆ ಮರಳುವ ಬಗ್ಗೆ ಬಿಜೆಪಿ ನಾಯಕರಿಗೂ ಸ್ಪಷ್ಟ ಮಾಹಿತಿ ದೊರೆತಿದೆ ಎನ್ನಲಾಗಿದೆ.

ಬೇಗ್‌ ಮನವೊಲಿಕೆ

ಮೈತ್ರಿ ಸರಕಾರ ಉಳಿಸಿಕೊಳ್ಳುವ ದೋಸ್ತಿ ನಾಯಕರ ಕಾರ್ಯತಂತ್ರದ ಭಾಗವಾಗಿ ರಾಮಲಿಂಗಾರೆಡ್ಡಿ ಹಾಗೂ ಸುಧಾಕರ್‌ ಯೂಟರ್ನ್‌ ಪಡೆಯುವ ಸ್ಪಷ್ಟತೆ ಮೂಡಿದ ಬೆನ್ನಲ್ಲೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ಶಾಸಕ ರೋಷನ್‌ ಬೇಗ್‌ ಮನವೊಲಿಕೆ ಪ್ರಯತ್ನವೂ ಬುಧವಾರ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯಂತೆ ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ರೋಷನ್‌ ಬೇಗ್‌ ಮನವೊಲಿಕೆಗೆ ಮಾತುಕತೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ