ಆ್ಯಪ್ನಗರ

ಕಬ್ಬು ಬೆಳೆಗೆ ದರ ನಿಗದಿಪಡಿಸಲು ಆಗ್ರಹ

ರಾಜ್ಯ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವುದರ ಜತೆಗೆ ರಾಜ್ಯ ಸರಕಾರ ಇನ್ನೊಂದು ವಾರದೊಳಗೆ ಕಬ್ಬು ಬೆಳೆಗಾರರ ಬೆಳೆಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಅಖಿಲ ಕರ್ನಾಟಕ ಕಬ್ಬು ...

Vijaya Karnataka 13 Jun 2019, 5:00 am
ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವುದರ ಜತೆಗೆ ರಾಜ್ಯ ಸರಕಾರ ಇನ್ನೊಂದು ವಾರದೊಳಗೆ ಕಬ್ಬು ಬೆಳೆಗಾರರ ಬೆಳೆಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.
Vijaya Karnataka Web sugar cane
ಕಬ್ಬು ಬೆಳೆಗೆ ದರ ನಿಗದಿಪಡಿಸಲು ಆಗ್ರಹ


''ಕಬ್ಬು ಬೆಳೆಗೆ 2013-14ರಿಂದ ಈವರೆಗೂ ಕೇಂದ್ರ ಪ್ರೋತಾಹ ಧನ (ಎಫ್‌ಆರ್‌ಪಿ) ಹಾಗೂ ರಾಜ್ಯ ಸಲಹಾ ದರ (ಎಸ್‌ಎಪಿ) ನಿಗದಿ ಮಾಡುವಲ್ಲಿ ಸರಕಾರ ವಿಫಲವಾಗಿದೆ. ಈ ಕುರಿತು ಸರಕಾರ ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿದು ಚಳವಳಿ ನಡೆಸಲಾಗುವುದು,'' ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಗುರುಮಠ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಎಚ್ಚರಿಸಿದರು.

''ರಾಜ್ಯದಲ್ಲಿ ಶೇ. 80ರಷ್ಟು ರಾಜಕಾರಣಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿರುವುದರಿಂದ ಸರಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಹೀಗಾಗಿಯೇ ರೈತರು ಎಷ್ಟೆಲ್ಲಾ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ,''ಎಂದರು.

''ರಾಜ್ಯದ ಸಂಪತ್ತನ್ನು ಹೀಗೆ ಮಾರಾಟ ಮಾಡುವ ಮೂಲಕ ರಾಜಕಾರಣಿಗಳು ಮುಂದೊಂದು ದಿನ ರೈತರನ್ನು ಜೀತದಾಳುಗಳಾಗಿ ಮಾಡಲಿದ್ದಾರೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ