ಆ್ಯಪ್ನಗರ

ಕಬ್ಬು ಬೆಳೆಗಾರರಿಗೆ ಬಾಕಿ ಶೀಘ್ರ ಪಾವತಿಸಲು ಮುಖ್ಯಮಂತ್ರಿ ಸೂಚನೆ

ಕಬ್ಬು ಬೆಳಗಾರರಿಗೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ಇನ್ನೂ 4 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಾಗಿದೆ. 2018-19ನೇ ಸಾಲಿನ ಈ ಬಾಕಿಯನ್ನು 15 ದಿನದಲ್ಲಿ ರೈತರಿಗೆ ಕೊಡಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ

Vijaya Karnataka Web 20 May 2019, 9:13 pm
ಬೆಂಗಳೂರು: ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಬರಬೇಕಾಗಿರುವ ಬಾಕಿ ಹಣವನ್ನು ಸಾಧ್ಯವಾದಷ್ಟು ಬೇಗ ಕೊಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ರಾಜ್ಯ ಕಬ್ಬು ಬೆಳಗಾರರ ನಿಯೋಗ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ನಂತರ ಈ ಭರವಸೆ ದೊರೆತಿದೆ ಎಂದು ನಿಯೋಗದ ನೇತೃತ್ವ ವಹಿಸಿದ್ದ ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ತಿಳಿಸಿದ್ದಾರೆ.

ಕಬ್ಬು ಬೆಳಗಾರರಿಗೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ಇನ್ನೂ 4 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಾಗಿದೆ. 2018-19ನೇ ಸಾಲಿನ ಈ ಬಾಕಿಯನ್ನು 15 ದಿನದಲ್ಲಿ ರೈತರಿಗೆ ಕೊಡಿಸಬೇಕು ಎಂದು ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದು, ಆದಷ್ಟು ಬೇಗ ಬಾಕಿ ಹಣ ಕೊಡಿಸುವ ಭರವಸೆ ನೀಡಿದ್ದಾರೆ.

ಕಬ್ಬು ಬೆಳೆಗಾರರ ಮೇಲೆ ದಾಖಲು ಮಾಡಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯುವುದಾಗಿ ಸರ್ಕಾರದಿಂದ ಭರವಸೆ ದೊರೆಕಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ