ಆ್ಯಪ್ನಗರ

6163 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಹನೂರು ತಾಲೂಕು ಸುಳವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತನಿಖಾಧಿಕಾರಿ 6,163 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

Vijaya Karnataka 19 Mar 2019, 5:00 am
ಸುಳವಾಡಿ ಪ್ರಕರಣ | 332 ಮಂದಿ ಸಾಕ್ಷಿಗಳ ಹೇಳಿಕೆ ಸಂಗ್ರಹ
Vijaya Karnataka Web sulavadi incidentcharge sheet submit
6163 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ


ಚಾಮರಾಜನಗರ : ಹನೂರು ತಾಲೂಕು ಸುಳವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತನಿಖಾಧಿಕಾರಿ 6,163 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾಧಿಕಾರಿ ಕೊಳ್ಳೇಗಾಲ ಡಿವೈಎಸ್ಪಿ ಪುಟ್ಟಮಾದಯ್ಯ ಅವರು ನಾಲ್ವರು ಆರೋಪಿಗಳ ವಿರುದ್ಧದ ಚಾರ್ಜ್‌ಶೀಟ್‌ ಅನ್ನು ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ಮಾ.16ರಂದು ಸಲ್ಲಿಸಿದ್ದಾರೆ.

ಆರೋಪಿಗಳಾದ ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಇಮ್ಮಡಿ ಮಹದೇವ ಸ್ವಾಮಿ, ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ ಹಾಗೂ ದೊಡ್ಡಯ್ಯ ಎಂಬುವವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಘಟನೆ ನಡೆದ 2018ರ ಡಿ.14ರಂದು ವಿಷ ಪ್ರಸಾದ ಸೇವಿಸಿ ಮೃತಪಟ್ಟವರು ಕುಟುಂಬಸ್ಥರು, ಅಸ್ವಸ್ಥಗೊಂಡವರು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಚಿಕಿತ್ಸೆ ನೀಡಿದ ವೈದ್ಯರು, ದೇವಾಲಯದ ಟ್ರಸ್ಟಿಗಳು, ನಾನಾ ಗ್ರಾಮಸ್ಥರು ಸೇರಿದಂತೆ ಒಟ್ಟು 332 ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗಿದ್ದು, ಒಟ್ಟು 6,163 ಪುಟಗಳ ದೋಷಾರೋಪಪಟ್ಟಿಯನ್ನು ದೊರೆತ ನಾನಾ ಸಾಕ್ಷ್ಯಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ