ಆ್ಯಪ್ನಗರ

ಪ್ರಸಾದದಲ್ಲಿವಿಷ ಬೆರೆಸಿದ ಆರೋಪಿಗಿಲ್ಲಜಾಮೀನು

ಕಳೆದ ಡಿಸೆಂಬರ್‌ನಲ್ಲಿಚಾಮರಾಜನಗರ ಜಿಲ್ಲೆಯ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇಗುಲದಲ್ಲಿನಡೆದ ಪ್ರಸಾದದಲ್ಲಿವಿಷ ಹಾಕಿದ ಪ್ರಕರಣದಲ್ಲಿಪ್ರಮುಖ ...

Vijaya Karnataka 26 Sep 2019, 5:00 am
ಬೆಂಗಳೂರು: ಕಳೆದ ಡಿಸೆಂಬರ್‌ನಲ್ಲಿಚಾಮರಾಜನಗರ ಜಿಲ್ಲೆಯ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇಗುಲದಲ್ಲಿನಡೆದ ಪ್ರಸಾದದಲ್ಲಿವಿಷ ಹಾಕಿದ ಪ್ರಕರಣದಲ್ಲಿಪ್ರಮುಖ ಆರೋಪಿ ಇಮ್ಮುಡಿ ಮಹದೇವಸ್ವಾಮಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Vijaya Karnataka Web haamer


ಇಮ್ಮಡಿ ಮಹದೇವಸ್ವಾಮಿಯ ಅರ್ಜಿಯ ಕುರಿತು ತೀರ್ಪು ಕಾಯ್ದಿರಿಸಿದ್ದ ನ್ಯಾ.ಕೆ.ಎನ್‌.ಫಣೀಂದ್ರ ಅವರಿದ್ದ ಏಕಸದಸ್ಯಪೀಠ ಬುಧವಾರ ಜಾಮೀನು ನೀಡಲು ನಿರಾಕರಿಸಿತು.

ಆರೋಪಿ ಮೊದಲ ಹಾಗೂ ಪ್ರಮುಖ ಆರೋಪಿಯಾಗಿದ್ದಾರೆ. ಇದು ಅತ್ಯಂತ ಗಂಭೀರ ಪ್ರಕರಣ, ಇನ್ನೂ ವಿಚಾರಣಾ ಹಂತದಲ್ಲಿದೆ. ಈಗ ಜಾಮೀನು ನೀಡಿದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಪೀಠ ವಜಾಗೊಳಿಸಿದೆ.

ಪ್ರಾಸಿಕ್ಯೂಷನ್‌ ಪರ ವಾದಿಸಿದ್ದ ಎಸ್‌ಪಿಪಿ-2 ವಿ.ಎಸ್‌. ಹೆಗಡೆ, ''ಇಮ್ಮಡಿ ಮಹದೇವಸ್ವಾಮಿ ಪ್ರಮುಖ ಆರೋಪಿ. 16 ಮಂದಿಯನ್ನು ಬಲಿತೆಗೆದುಕೊಂಡಿದ್ದರಿಂದ ಜಾಮೀನು ನೀಡಬಾರದು,'' ಎಂದು ವಾದಿಸಿದ್ದರು.

2018ರ ಡಿಸೆಂಬರ್‌ನಲ್ಲಿಹನೂರು ತಾಲೂಕಿನ ಸುಳ್ವಾಡಿಯ ಕಿತ್ತುಗತ್ತಿ ಮಾರಮ್ಮ ದೇವಾಲಯದ ಗೋಪುರ ಶಂಕುಸ್ಥಾಪನೆ ವೇಳೆ ಅನ್ನಸಂತರ್ಪಣೆಯ ಪ್ರಸಾದ ಸೇವಿಸಿ ನೂರಾರು ಮಂದಿ ಅಸ್ವಸ್ಥರಾಗಿದ್ದರು. ಆನಂತರ ಪ್ರಸಾದದಲ್ಲಿವಿಷ ಬೇರೆಸಿರುವ ಅಂಶ ಬಯಲಾಗಿತ್ತು, ಅಸ್ವಸ್ಥರಾಗಿದ್ದವರಲ್ಲಿ16 ಮಂದಿ ಸಾವನ್ನಪ್ಪಿದ್ದರು. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ ಮತ್ತಿತರನ್ನು ಬಂಧಿಸಿದ್ದರು. ಅಧೀನ ನ್ಯಾಯಾಲಯ ಈಗಾಗಲೇ ಸ್ವಾಮೀಜಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ ಅವರು ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ