ಆ್ಯಪ್ನಗರ

ಭಾನುವಾರದ ಲಾಕ್‌ಡೌನ್: ರಾಜ್ಯಾದ್ಯಂತ ಹೇಗಿದೆ ಸ್ಥಿತಿಗತಿ?

ಭಾನುವಾರದ ಲಾಕ್‌ಡೌನ್‌ನಿಂದಾಗಿ ರಾಜ್ಯಾದ್ಯಂತ ಜನಸಂಚಾರ ವಿರಳವಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಲಾಕ್‌ಡೌನ್‌ ಯಶಸ್ವಿಯಾಗಲು ಜಿಲ್ಲಾಡಳಿತ ಹಾಗೂ ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

Vijaya Karnataka Web 5 Jul 2020, 12:15 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಸೋಂಕನ್ನು ತಡೆಗಟ್ಟುವುದು ಸರ್ಕಾರಕ್ಕೂ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಒಂದು ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ತರಲಾಗಿದೆ. ಪರಿಣಾಮ ರಾಜ್ಯಾದ್ಯಂತ ಬಹುತೇಕ ಲಾಕ್‌ಡೌನ್ ಯಶಸ್ವಿಯಾಗುತ್ತಿದೆ.
Vijaya Karnataka Web sunday lockdown



ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳಲ್ಲಿ ವಾಹನ ಸಂಚಾರವೂ ತೀರ ಕಡಿಮೆ ಇದೆ. ಪರಿಣಾಮ ಒಂದು ರೀತಿಯ ಬಿಕೋ ವಾತಾವರಣ ಕಂಡುಬರುತ್ತಿದೆ. ಬೆಂಗಳೂರು, ಮಂಗಳೂರು, ಬಳ್ಳಾರಿ, ಬೆಳಗಾವಿ, ಹಾಸನ ಜಿಲ್ಲೆಗಳಲ್ಲಿ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಕೆಲವೊಂದು ಮಾರ್ಕೆಟ್‌ ಪ್ರದೇಶಗಳನ್ನು ಹೊರತಾಗಿ ಇತರ ಕಡೆಗಳಲ್ಲಿ ಜನರ ಓಡಾಟ ವಿರಳವಾಗಿದೆ.

ಕೊರೊನಾ ಸಂಕಷ್ಟ: ಕ್ಯಾಬ್‌ಗಳಿಗೆ ಕುಸಿದ ಡಿಮ್ಯಾಂಡ್‌, ವ್ಯಾಪಾರಿಗಳಾಗಿ ಬದಲಾದ ಕ್ಯಾಬ್‌ ಚಾಲಕರು

ತಾತ್ಕಾಲಿಕ ಮಾರ್ಕೆಟ್‌ ಪ್ರದೇಶಗಳಲ್ಲಿ ಲಾಕ್‌ಡೌನ್ ಇದ್ದರೂ ಜನರು ಅಗತ್ಯ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಮಂಗಳೂರಿನಲ್ಲಿ ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಸಂಡೇ ಲಾಕ್‌ಡೌನ್ ಕಟ್ಟಿನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಬಳ್ಳಾರಿ, ಬೆಳಗಾವಿ, ಹಾಸನ, ಯಾದಗಿರಿ ಜಿಲ್ಲೆಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿರುವವರಿಗೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ. ಮೈಕ್‌ಗಳಲ್ಲಿ ಅನೌನ್ಸ್‌ ಮಾಡುತ್ತಾ ಪ್ರಮುಖ ರಸ್ತೆಗಳನ್ನು ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಕೊರೊನಾವನ್ನು `ಆಹ್ವಾನಿಸುವ' ಪಾರ್ಟಿ! : ಆತಂಕ ಮೂಡಿಸಿದ ವಿದ್ಯಾರ್ಥಿಗಳ ನಡೆ

ತುಮಕೂರು, ರಾಯಚೂರು ಜಿಲ್ಲೆಗಳಲ್ಲೂ ಬಸ್‌ ನಿಲ್ದಾಣಗಳು ಖಾಲಿಯಾಗಿವೆ. ಬಸ್‌, ಆಟೋಗಳು ಭಾನುವಾರ ರಸ್ತೆಗಿಳಿದಿಲ್ಲ. ಹೋಟೆಲ್‌ಗಳಲ್ಲಿ ಕೇವಲ ಪಾರ್ಸೆಲ್‌ ನೀಡಲು ಮಾತ್ರ ಅವಕಾಶವಿದೆ. ಇಷ್ಟೆಲ್ಲಾ ಬಿಗಿ ಕ್ರಮಗಳು ಇದ್ದರೂ ಕೆಲವು ಅಗತ್ಯ ವಸ್ತುಗಳ ಖರೀದಿಗೆ ರಸ್ತೆಗಿಳಿದರೆ ಮತ್ತೆ ಕೆಲವರು ಅನಾವಷ್ಯಕ ಓಡಾಟವನ್ನು ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ