ಆ್ಯಪ್ನಗರ

ಸಂಡೇ ಲಾಕ್‌ಡೌನ್: ರಾಜ್ಯಾದ್ಯಂತ ಸಂಪೂರ್ಣ ಬಂದ್‌, ರಸ್ತೆಗಿಳಿದರೆ ಲಾಠಿ ಏಟು

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಂಡೇ ಲಾಕ್‌ಡೌನ್ ರಾಜ್ಯಾದ್ಯಂತ ಜಾರಿಯಲ್ಲಿದೆ. ಪರಿಣಾಮ ಬೆಂಗಳೂರು ನಗರ ಸೇರಿದಂತೆ ಇತರ ಕಡೆಗಳಲ್ಲಿ ಜನಸಂಚಾರ ವಿರಳವಾಗಿದೆ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 12 Jul 2020, 12:17 pm
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರದ ಲಾಕ್‌ಡೌನ್ ಪರಿಣಾಮ ರಾಜ್ಯಾದ್ಯಂತ ಸಂಪೂರ್ಣ ಬಂದ್ ವಾತಾವರಣವಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಅಂಗಡಿಗಳಿಗೆ ಬರುತ್ತಿದ್ದಾರೆ. ಉಳಿದಂತೆ ವಾಹನ ಸಂಚಾರ, ಜನರ ಓಡಾಟ ಕಡಿಮೆ ಇದೆ.
Vijaya Karnataka Web sunday lockdown


ಬೆಂಗಳೂರಿನಲ್ಲಿ ಭಾನುವಾರ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಖಾಸಗಿ ವಾಹನಗಳು ಕಡಿಮೆ ಸಂಖ್ಯೆಯಲ್ಲಿ ರಸ್ತೆಗಿಳಿದಿವೆ. ಹಣ್ಣು, ತರಕಾರಿ, ದಿನಸಿ ಅಂಗಡಿಗಳು ತೆರೆದಿವೆ. ಹೋಟೆಲ್‌ಗಳು ತೆರೆದಿದ್ದು ಪಾರ್ಸೆಲ್‌ ನೀಡಲು ಮಾತ್ರ ಅವಕಾಶ ನೀಡಲಾಗಿದೆ.

ಆ್ಯಂಬುಲೆನ್ಸ್‌ಗಾಗಿ ರಾತ್ರಿಯಿಡೀ ಕಾದು ಕುಳಿತ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ!

ಇನ್ನು ಮಂಗಳೂರು, ಮೈಸೂರು, ಉಡುಪಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲೂ ಲಾಕ್‌ಡೌನ್ ಪರಿಣಾಮ ಸಂಪೂರ್ಣ ಬಂದ್‌ ಆಗಿದೆ. ಜಿಲ್ಲೆಗಳಲ್ಲಿ ಜನರ ಓಡಾಟ ಕಡಿಮೆ ಇದೆ. ಅನಗತ್ಯವಾಗಿ ಓಡಾಟ ನಡೆಸುವವರಿಗೆ ಕಲಬುರ್ಗಿ ಜಿಲ್ಲೆ ಸೇರಿದಂತೆ ಕೆಲವು ಕಡೆಗಳಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಕೊರೊನಾ ಸೋಂಕು ಪ್ರಕರಣಗಳು ಜಾಸ್ತಿ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಜನರ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ