ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರದ ಲಾಕ್ಡೌನ್ ಪರಿಣಾಮ ರಾಜ್ಯಾದ್ಯಂತ ಸಂಪೂರ್ಣ ಬಂದ್ ವಾತಾವರಣವಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಅಂಗಡಿಗಳಿಗೆ ಬರುತ್ತಿದ್ದಾರೆ. ಉಳಿದಂತೆ ವಾಹನ ಸಂಚಾರ, ಜನರ ಓಡಾಟ ಕಡಿಮೆ ಇದೆ.
ಬೆಂಗಳೂರಿನಲ್ಲಿ ಭಾನುವಾರ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಖಾಸಗಿ ವಾಹನಗಳು ಕಡಿಮೆ ಸಂಖ್ಯೆಯಲ್ಲಿ ರಸ್ತೆಗಿಳಿದಿವೆ. ಹಣ್ಣು, ತರಕಾರಿ, ದಿನಸಿ ಅಂಗಡಿಗಳು ತೆರೆದಿವೆ. ಹೋಟೆಲ್ಗಳು ತೆರೆದಿದ್ದು ಪಾರ್ಸೆಲ್ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
ಆ್ಯಂಬುಲೆನ್ಸ್ಗಾಗಿ ರಾತ್ರಿಯಿಡೀ ಕಾದು ಕುಳಿತ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ!
ಇನ್ನು ಮಂಗಳೂರು, ಮೈಸೂರು, ಉಡುಪಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲೂ ಲಾಕ್ಡೌನ್ ಪರಿಣಾಮ ಸಂಪೂರ್ಣ ಬಂದ್ ಆಗಿದೆ. ಜಿಲ್ಲೆಗಳಲ್ಲಿ ಜನರ ಓಡಾಟ ಕಡಿಮೆ ಇದೆ. ಅನಗತ್ಯವಾಗಿ ಓಡಾಟ ನಡೆಸುವವರಿಗೆ ಕಲಬುರ್ಗಿ ಜಿಲ್ಲೆ ಸೇರಿದಂತೆ ಕೆಲವು ಕಡೆಗಳಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಕೊರೊನಾ ಸೋಂಕು ಪ್ರಕರಣಗಳು ಜಾಸ್ತಿ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕುವ ಮೂಲಕ ಜನರ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಖಾಸಗಿ ವಾಹನಗಳು ಕಡಿಮೆ ಸಂಖ್ಯೆಯಲ್ಲಿ ರಸ್ತೆಗಿಳಿದಿವೆ. ಹಣ್ಣು, ತರಕಾರಿ, ದಿನಸಿ ಅಂಗಡಿಗಳು ತೆರೆದಿವೆ. ಹೋಟೆಲ್ಗಳು ತೆರೆದಿದ್ದು ಪಾರ್ಸೆಲ್ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
ಆ್ಯಂಬುಲೆನ್ಸ್ಗಾಗಿ ರಾತ್ರಿಯಿಡೀ ಕಾದು ಕುಳಿತ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ!
ಇನ್ನು ಮಂಗಳೂರು, ಮೈಸೂರು, ಉಡುಪಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲೂ ಲಾಕ್ಡೌನ್ ಪರಿಣಾಮ ಸಂಪೂರ್ಣ ಬಂದ್ ಆಗಿದೆ. ಜಿಲ್ಲೆಗಳಲ್ಲಿ ಜನರ ಓಡಾಟ ಕಡಿಮೆ ಇದೆ. ಅನಗತ್ಯವಾಗಿ ಓಡಾಟ ನಡೆಸುವವರಿಗೆ ಕಲಬುರ್ಗಿ ಜಿಲ್ಲೆ ಸೇರಿದಂತೆ ಕೆಲವು ಕಡೆಗಳಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಕೊರೊನಾ ಸೋಂಕು ಪ್ರಕರಣಗಳು ಜಾಸ್ತಿ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕುವ ಮೂಲಕ ಜನರ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.