ಆ್ಯಪ್ನಗರ

ಮೈತ್ರಿಯಾಗೌಡ ಪ್ರಕರಣ ಮರು ತನಿಖೆಗೆ ಸುಪ್ರೀಂ ಗ್ರೀನ್‌ ಸಿಗ್ನಲ್‌

ಕೇಂದ್ರ ಸಚಿವ ಸದಾನಂದಗೌಡರ ಪುತ್ರ ಕಾರ್ತಿಕ್‌ ಗೌಡ ವಿರುದ್ಧ ದಾಖಲಾಗಿದ್ದ ಹಳೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೊರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.

Vijaya Karnataka Web 11 Aug 2018, 4:00 am
ಬೆಂಗಳೂರು:
ಕೇಂದ್ರ ಸಚಿವ ಸದಾನಂದಗೌಡರ ಪುತ್ರ ಕಾರ್ತಿಕ್‌ ಗೌಡ ವಿರುದ್ಧ ದಾಖಲಾಗಿದ್ದ ಹಳೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೊರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.
Vijaya Karnataka Web supreme green signal to re investigate maitreya gowda case
ಮೈತ್ರಿಯಾಗೌಡ ಪ್ರಕರಣ ಮರು ತನಿಖೆಗೆ ಸುಪ್ರೀಂ ಗ್ರೀನ್‌ ಸಿಗ್ನಲ್‌


ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿ ಅರಿಶಿನ ದಾರವನ್ನು ಕೊರಳಿಗೆ ಕಟ್ಟಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಿ ಚಿತ್ರನಟಿ ಮೈತ್ರಿಯಾಗೌಡ ದೂರು ಸಲ್ಲಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅತ್ಯಾಚಾರ ನಡೆಸಿದ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣದಿಂದ ಸೆಕ್ಷನ್‌ 376 ನ್ನು ತೆಗೆದಿದ್ದರು. ಅಲ್ಲದೆ ಅತ್ಯಾಚಾರ ನಡೆದಿಲ್ಲ ಎಂದು ಆರೋಪ ಪಟ್ಟಿಯಲ್ಲೂ ತಿಳಿಸಿದ್ದರು.

ಪೊಲೀಸರ ಆರೋಪ ಪ್ರಶ್ನಿಸಿ ನಟಿ ಮೈತ್ರಿಯಾಗೌಡ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್‌ ಮರು ತನಿಖೆ ಅಗತ್ಯವಿಲ್ಲ ಎಂದು ಆದೇಶಿಸಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಮೈತ್ರಿಯಾಗೌಡ ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಅರ್ಜಿಯಲ್ಲಿನ ಸಂಗತಿಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿ ಮರು ತನಿಖೆಗೆ ಸೂಚನೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ