ಆ್ಯಪ್ನಗರ

ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿ ಮಲಗಿದ್ದಾರೆ ? ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎಸ್‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ್ದು ಹೀಗೆ.

Vijaya Karnataka Web 7 Apr 2020, 1:47 pm
ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರಶ್ನೆಗೆ ಸಚಿವ ಕೆ.ಎಸ್‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದರು.
Vijaya Karnataka Web ks eshwarappa


ನಾನು ಎಲ್ಲಿ ಮಲಗಿದ್ದೇನೆ ಎಂದು ಡಿಕೆಶಿ ಕೇಳಿದ್ದಾರೆ. ನಾನು ಎಲ್ಲಿ ಮಲಗಿದ್ದೆ, ಎಲ್ಲಿ ಓಡಾಡಿದ್ದೆ ಎಂದು ಹೇಳುವುದಿಲ್ಲ. ಅವರಿಗೆ ತೃಪ್ತಿ ಪಡಿಸಲು ನಾನೇನು ಹೇಳುವುದಿಲ್ಲ. ಪ್ರತಿ ತಾಲೂಕುಗಳಿಗೆ ಹೋಗಿ ಸಮಸ್ಯೆ ಆಲಿಸಿದ್ದೇನೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎಲ್ಲಿದೆ ಎಂದು ಡಿಕೆಶಿ ಹೇಳಲಿ ಬಗೆಹರಿಸುತ್ತೇನೆ ಎಂದು ತಿರುಗೇಟು ನೀಡಿದರು.

ಸರ್ಕಾರಿ ನೌಕರರ ವೇತನ ಕಡಿತಕ್ಕೆ ಚಿಂತನೆ! ಕಿಡಿಕಾರಿದ ಡಿಕೆಶಿ

ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ ರೂ‌ಪಾಯಿ ಹಣ ಬಿಡುಗಡೆ ಆಗಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ 1,039 ಕೋಟಿ ರೂ ಬಾಕಿ ಹಣ ಕೊಡಬೇಕಿದೆ. ರಾಜ್ಯ ಸರ್ಕಾರದಿಂದಲೂ 257 ಕೋಟಿ ರೂ ಅನುದಾ‌ನ ಇದೆ. ಹಿಂದೆ ಕೆಲವರಿಗೆ ಕೂಲಿ ಮತ್ತು ಸಲಕರಣೆಗಳ ಬಿಲ್ ಬಾಕಿ‌ ಇತ್ತು ಇದೀಗ ಎಲ್ಲವನ್ನೂ ಪಾವತಿಸಿದ ಬಳಿಕ 1077‌ ಬಾಕಿ ಹಣ ಉಳಿಯಲಿದೆ ಎಂದು ಮಾಹಿತಿ ನೀಡಿದರು.

ಕೊರೊನಾ ವೈರಸ್‌ನಿಂದ ಉದ್ಯೋಗ ನಷ್ಟ, ಇನ್ಮುಂದೆ ಬದುಕು ಕಷ್ಟ ಕಷ್ಟ!

ರಾಜ್ಯದಲ್ಲಿ ಒಬ್ಬ ಕೂಲಿ ಕಾರ್ಮಿಕನಿಗೆ 275 ರೂ ವರೆಗೆ ಕೂಲಿ‌ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿಕೆ ‌ನರೇಗಾ ಹಣದ ಬಳಕೆ ಮಾಡಿಕೊಳ್ಳುತ್ತೇವೆ. ಕೊರೊನಾದಿಂದಾಗಿ ನರೇಗಾ ಕೂಲಿ ಹಣದಲ್ಲಿ ಹೆಚ್ಚಳ ಆಗಿದೆ, ಇನ್ಮುಂದೆ ನರೇಗಾ ಕಾಮಗಾರಿಗಳಿಗೆ ಚುರುಕು ನೀಡಲಾಗುತ್ತದೆ. ನರೇಗಾ ಕೂಲಿ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸಿ ದುಡಿಮೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ