ಹೊಸದಿಲ್ಲಿ: ಪೆನ್ನಾರ್ ಮತ್ತು ಪಾಲಾರ್ ಕಣಿವೆ ವ್ಯಾಪ್ತಿಯ ನೀರು ಬಳಸಿಕೊಳ್ಳುವ ರಾಜ್ಯದ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು, ಈ ಕುರಿತು ರಾಜ್ಯಗಳಿಗೆ ಸಮರ್ಪಕ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ಮೇಲ್ಮನವಿ ಸಲ್ಲಿಸಿದೆ.
ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಮೂಲಕ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮಾರ್ಕಂಡೇಯ ಜಲಾಶಯ ಯೋಜನೆಯನ್ನು ಕರ್ನಾಟಕ ಸರಕಾರ ರೂಪಿಸಿದೆ. ''240 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಕರ್ನಾಟಕ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರನ್ನು ತಡೆಯಲಾಗುತ್ತಿದೆ. ಇದರಿಂದಾಗಿ ತಮಿಳುನಾಡಿನ 6 ಜಿಲ್ಲೆಗಳಿಗೆ ನೀರಿನ ಬರ ಎದುರಾಗಲಿದೆ. ಬರ ಪರಿಸ್ಥಿತಿಯಲ್ಲಿ ಯೋಜನೆ ರೂಪಿಸುವ ಉದ್ದೇಶವೇನು?'' ಎಂದು ತಮಿಳುನಾಡು ಪ್ರಶ್ನಿಸಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶುದ್ಧೀಕರಿಸಿದ ನೀರನ್ನು ಹರಿಸುವ 'ಕೆ.ಸಿ.ವ್ಯಾಲಿ' ಯೋಜನೆಗೂ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು, ''ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರ ಕೈಗೊಂಡಿರುವ ಯೋಜನೆಗಳಿಗೂ ಅವಕಾಶ ನೀಡಬಾರದು,'' ಎಂದು ಮನವಿ ಮಾಡಿಕೊಂಡಿದೆ.
ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಮೂಲಕ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮಾರ್ಕಂಡೇಯ ಜಲಾಶಯ ಯೋಜನೆಯನ್ನು ಕರ್ನಾಟಕ ಸರಕಾರ ರೂಪಿಸಿದೆ. ''240 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಕರ್ನಾಟಕ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರನ್ನು ತಡೆಯಲಾಗುತ್ತಿದೆ. ಇದರಿಂದಾಗಿ ತಮಿಳುನಾಡಿನ 6 ಜಿಲ್ಲೆಗಳಿಗೆ ನೀರಿನ ಬರ ಎದುರಾಗಲಿದೆ. ಬರ ಪರಿಸ್ಥಿತಿಯಲ್ಲಿ ಯೋಜನೆ ರೂಪಿಸುವ ಉದ್ದೇಶವೇನು?'' ಎಂದು ತಮಿಳುನಾಡು ಪ್ರಶ್ನಿಸಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶುದ್ಧೀಕರಿಸಿದ ನೀರನ್ನು ಹರಿಸುವ 'ಕೆ.ಸಿ.ವ್ಯಾಲಿ' ಯೋಜನೆಗೂ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು, ''ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರ ಕೈಗೊಂಡಿರುವ ಯೋಜನೆಗಳಿಗೂ ಅವಕಾಶ ನೀಡಬಾರದು,'' ಎಂದು ಮನವಿ ಮಾಡಿಕೊಂಡಿದೆ.