ಆ್ಯಪ್ನಗರ

ಮುಂದುವರಿದ ಬರ, ಟ್ಯಾಂಕರ್‌ ನೀರು ಪೂರೈಕೆ ವಿಸ್ತರಣೆ

ರಾಜ್ಯದ ಬರ ಪರಿಸ್ಥಿತಿಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಸಲು ಇರುವ ನಿರ್ಬಂಧ ಸಡಿಲಿಸಿ ಈ ತಿಂಗಳ ಅಂತ್ಯದವರೆಗೆ ನೀರು ಪೂರೈಸಲು ನಿರ್ಧರಿಸಲಾಗಿದೆ.

Vijaya Karnataka 2 Aug 2019, 5:00 am
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಸಲು ಇರುವ ನಿರ್ಬಂಧ ಸಡಿಲಿಸಿ ಈ ತಿಂಗಳ ಅಂತ್ಯದವರೆಗೆ ನೀರು ಪೂರೈಸಲು ನಿರ್ಧರಿಸಲಾಗಿದೆ.
Vijaya Karnataka Web WATER Supply


2018-19ನೇ ಸಾಲಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಸಮಸ್ಯಾತ್ಮಕ ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಸಲು 90 ದಿನಗಳ ನಿರ್ಬಂಧ ಸಡಿಲಿಸಿ ಕಳೆದ ಮೇ ಅಂತ್ಯದವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೆ ಜೂನ್‌ ಅಂತ್ಯದವರೆಗೂ ವಿಸ್ತರಿಸಲಾಗಿತ್ತು. ಪ್ರಸ್ತುತ ಬರದ ತೀವ್ರತೆ ಗಮನಿಸಿರುವ ಕಂದಾಯ ಇಲಾಖೆಯು ಈ ಅವಧಿಯನ್ನು ಆಗಸ್ಟ್‌ ಅಂತ್ಯದವರೆಗೂ ವಿಸ್ತರಿಸಿದೆ. ನೀರು ಪೂರೈಕೆಗೆ ತಗಲುವ ವೆಚ್ಚವನ್ನು ಎಸ್‌.ಡಿ.ಆರ್‌.ಎಫ್‌. ಅಡಿ ಈಗಾಗಲೇ ಬಿಡುಗಡೆಯಾದ ಅನುದಾನದಿಂದ ಭರಿಸುವುದು ಹಾಗೂ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ