ಆ್ಯಪ್ನಗರ

ಖಾಸಗಿ ಶಾಲೆ ಶಿಕ್ಷಕರ ಪ್ರತಿಭಟನೆ : 11 ಶಿಕ್ಷಕರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ...

Vijaya Karnataka 13 Sep 2018, 5:00 am
ಬೆಂಗಳೂರು: ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಗ್ರಹ ನಡೆಸುತ್ತಿದ್ದು, ಒಟ್ಟು 11 ಮಂದಿ ಶಿಕ್ಷಕರು ಅಸ್ವಸ್ಥಗೊಂಡು ಬುಧವಾರ ಆಸ್ಪತ್ರೆ ಸೇರಿದ್ದಾರೆ.
Vijaya Karnataka Web 1209-2-2-KSG_030 (2)


1987ರಿಂದ 1995ರ ನಡುವೆ ಆರಂಭವಾಗಿರುವ 86 ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ 59 ದಿನಗಳಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೆ.1ರಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಿಕ್ಷಣ ಸಚಿವ ಎನ್‌.ಮಹೇಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 86 ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವುದಾಗಿ ಭರವಸೆ ನೀಡಿ, ಧರಣಿಯನ್ನು ಕೈ ಬಿಡುವಂತೆ ಮನವಿ ಮಾಡಿದ್ದರು.

ಆದರೆ ಬೇಡಿಕೆ ಈಡೇರದ ಕಾರಣ ಶಿಕ್ಷಕರು ಧರಣಿ ಮುಂದುವರಿಸಿದ್ದರು. ಈಗ ಹಲವು ಶಿಕ್ಷಕರು ಅಸ್ವಸ್ಥಗೊಂಡಿದ್ದಾರೆ. ನಿತ್ರಾಣಗೊಂಡ ಶಿಕ್ಷಕರನ್ನು ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಶಾಸಕ ಸುರೇಶ್‌ಕುಮಾರ್‌ ಭೇಟಿ ನೀಡಿದ್ದರು. ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಶಿಕ್ಷಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ