ಆ್ಯಪ್ನಗರ

ನಕಲಿ ಪ್ರಮಾಣ ಪತ್ರ ನೀಡಿ ಸಿಕ್ಕಿಬಿದ್ದ ಶಿಕ್ಷಕರು

ಕಲಿ ವಿಶೇಷಚೇತನ ಪ್ರಮಾಣ ಪತ್ರ ನೀಡಿ ಸರಕಾರಿ ಶಾಲೆ ಶಿಕ್ಷಕರಾಗಿ ಬರೋಬ್ಬರಿ 20 ವರ್ಷ ಸೇವೆ ಸಲ್ಲಿಸಿದ ಬಳಿಕ ಸಿಕ್ಕಿಬಿದ್ದಿರುವ ಮೂವರು ಶಿಕ್ಷಕರ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಿಮಿನಲ್‌ ಕೇಸ್‌ ಹೂಡಿದೆ.

Vijaya Karnataka 26 Jun 2018, 7:33 am
ಬೆಂಗಳೂರು: ನಕಲಿ ವಿಶೇಷಚೇತನ ಪ್ರಮಾಣ ಪತ್ರ ನೀಡಿ ಸರಕಾರಿ ಶಾಲೆ ಶಿಕ್ಷಕರಾಗಿ ಬರೋಬ್ಬರಿ 20 ವರ್ಷ ಸೇವೆ ಸಲ್ಲಿಸಿದ ಬಳಿಕ ಸಿಕ್ಕಿಬಿದ್ದಿರುವ ಮೂವರು ಶಿಕ್ಷಕರ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಿಮಿನಲ್‌ ಕೇಸ್‌ ಹೂಡಿದೆ.
Vijaya Karnataka Web Fraud


ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಾದ ಜಿ.ಎಸ್‌.ನಾಗೇಶ್‌,ಷಣ್ಮುಖಯ್ಯ ಮತ್ತು ಡಿ.ಸಿ.ಜಗದೀಶ್‌ ಅವರ ವಿರುದ್ಧ ವಂಚನೆ ಮತ್ತು ಫೋರ್ಜರಿ ಕೇಸುಗಳನ್ನು ದಾಖಲು ಮಾಡಲಾಗಿದೆ. 1996-97ನೇ ಅವಧಿಯಲ್ಲಿ ಶಾಲಾ ಶಿಕ್ಷಕರಾಗಿ ನೇಮಕಗೊಂಡಿದ್ದ ಈ ಮೂವರ ವಿರುದ್ಧ ಹಾಸನದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ದೂರು ದಾಖಲಿಸಿದ್ದರು.

ವಿಶೇಷಚೇತನ ಕೋಟಾದಡಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದ ಅವರು,ಪ್ರಮಾಣಪತ್ರ ಸಲ್ಲಿಸಿ ನೇಮಕವಾಗಿದ್ದರು. ವೈದ್ಯ ಮಂಡಳಿ ಮುಂದೆ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ನಕಲಿ ದಾಖಲೆ ಸಲ್ಲಿಸಿ, ಸರ್ಟಿಫಿಕೇಟ್‌ ಪಡೆದಿರುವ ಅಂಶ ಬೆಳಕಿಗೆ ಬಂದಿದೆ.

ದೂರು ದಾಖಲಾಗುತ್ತಿದ್ದಂತೆ ಶಿಕ್ಷಕರು ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮೂವರಿಗೂ ಜಾಮೀನು ನೀಡಿದೆ. ಮೂವರು ತಲಾ ಎರಡು ಲಕ್ಷ ಬಾಂಡ್‌ ಸಲ್ಲಿಸಬೇಕು ಎಂಬ ಷರತ್ತು ವಿಧಿಸಿದೆ.

ಅಲ್ಲದೆ, ಅರ್ಜಿದಾರರು 15 ದಿನಗಳೊಳಗೆ ಖುದ್ದು ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ಅವರನ್ನು ವಿಚಾರಣೆ ನಡೆಸಿ ಅದೇ ದಿನ ಜಾಮೀನನ ಮೇಲೆ ಬಿಡುಗಡೆ ಮಾಡಬೇಕು ಎಂದೂ ಆದೇಶ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ