ಆ್ಯಪ್ನಗರ

ಡಿಕೆಶಿ, ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಪ್ರಯಾಣ ವಿಳಂಬ

ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ 2.30 ತಾಸು ತಡವಾಗಿ ಬಳ್ಳಾರಿಗೆ ತೆರಳುವಂತಾಗಿದೆ.

Vijaya Karnataka Web 31 Oct 2018, 4:37 pm
ಶಿವಮೊಗ್ಗ: ರಾಜ್ಯದಲ್ಲಿ ಉಪಚುನಾವಣೆಯ ಅಖಾಡ ಸಿದ್ಧವಾಗುತ್ತಿದ್ದಂತೆಯೇ ಮುಖಂಡರ ಓಡಾಟ ಚುರುಕಾಗಿದೆ. ಬಹಿರಂಗ ಪ್ರಚಾರದ ಕೊನೆ ದಿನ ಕಾಂಗ್ರೆಸ್‌ ನಾಯಕರು ತಡವಾಗಿ ತೆರಳಿದ್ದಾರೆ.
Vijaya Karnataka Web DKS


ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಬಳ್ಳಾರಿಗೆ ತೆರಳುವ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 10ಕ್ಕೆ ಶಿವಮೊಗ್ಗದಿಂದ ಬಳ್ಳಾರಿಗೆ ತೆರಳಬೇಕಿದ್ದ ಹೆಲಿಕಾಪ್ಟರ್‌ ಮಧ್ಯಾಹ್ಯ 12.20ಕ್ಕೆ ಪ್ರಯಾಣ ಆರಂಭಿಸಿದೆ. ಈ ಕಾರಣದಿಂದ ಕಾಂಗ್ರೆಸ್‌ ನಾಯಕರು ಪ್ರಚಾರ ಕಾರ್ಯಕ್ರಮಕ್ಕೆ ತಡವಾಗಿ ತಲುಪಿದ್ದಾರೆ.

ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್‌ ಏರಿದ್ದರು. ಇನ್ನೇನು ಹೆಲಿಕಾಪ್ಟರ್‌ ಹೊರಡಲಿದೆ ಎನ್ನುವಷ್ಟರಲ್ಲಿ ತಾಂತ್ರಿಕ ದೋಷ ಇರುವುದು ಗೊತ್ತಾಗಿದೆ. ಡಿಟೆಕ್ಟರ್‌ ಮೂಲಕ ಈ ಸಮಸ್ಯೆ ಪತ್ತೆಯಾದ ಕೂಡಲೇ ನಾಯಕರನ್ನು ಹೆಲಿಕಾಪ್ಟರ್‌ನಿಂದ ಕೆಳಗಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ಹೆಲಿಕಾಪ್ಟರ್‌ ಹೊರಡುವ ಮುನ್ನವೇ ತಾಂತ್ರಿಕ ದೋಷ ಪತ್ತೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ